ಕ್ರೀಡೆ

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಈ ಪಂದ್ಯವನ್ನು ಕೋಟ್ಯಂತರ ಜನರು ವೀಕ್ಷಿಸಿರುವುದು ದಾಖಲೆಯಾಗಿದೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ-20 ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಜಿಯೋಹಾಟ್ ಸ್ಟಾರ್‌ನಲ್ಲಿ ಬರೊಬ್ಬರಿ 82.1 ಕೋಟಿ ಮಂದಿ ಏಕಕಾಲದಲ್ಲಿ ವೀಕ್ಷಣೆ ಮಾಡಿದ್ದು, ಆ ಮೂಲಕ ಇದೇ ಮೊದಲ ಬಾರಿಗೆ ಟಿ-20 ವಿಶ್ವಕಪ್ ಪಂದ್ಯವನ್ನು ಇಷ್ಟು ಮಂದಿ ಏಕಕಾಲದಲ್ಲಿ ವೀಕ್ಷಣೆ ಮಾಡಿದ ಮೊದಲ ಪಂದ್ಯ ಎಂಬ ಕೀರ್ತಿಗೆ ಭಾಜನವಾಗಿದೆ.

ವೀಕ್ಷಣೆ ವಿವರ
ಫೈನಲ್ ಆರಂಭದ ಮೊದಲು ಗಾಯಕ ರಿಕಿ ಮಾರ್ಟಿನ್ ಪ್ರದರ್ಶನ ನೀಡಿದರು. ಟಾಸ್ ಸಮಯದಲ್ಲಿ 2.1 ಕೋಟಿ ಮತ್ತು 4.2 ಕೋಟಿ ವೀಕ್ಷಕರು ನೇರ ಪ್ರಸಾರ ವೀಕ್ಷಿಸಿದರೆ, ಭಾರತ ಬ್ಯಾಟಿಂಗ್ ಪ್ರಾರಂಭಿಸಿದಾಗ ವೀಕ್ಷಕರ ಸಂಖ್ಯೆ 6.5 ಕೋಟಿ ತಲುಪಿತು.

ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡುತ್ತಿದ್ದಂತೆ ವೀಕ್ಷಕರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಭಾರತದ ಬ್ಯಾಟಿಂಗ್ ಅಂತ್ಯದಲ್ಲಿ 43.9 ಕೋಟಿ ಇದ್ದ ವೀಕ್ಷಕರ ಸಂಖ್ಯೆ ಇನಿಂಗ್ಸ್ ವಿರಾಮದ ಸಮಯದಲ್ಲಿ 44.3 ಕೋಟಿಗೆ ಏರಿತ್ತು. ನ್ಯೂಜಿಲೆಂಡ್ ತಂಡವನ್ನು ಬೆನ್ನಟ್ಟುವ ಮೊದಲು ಭಾರತ 255 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಈ ವೇಳೆ ವೀಕ್ಷಕರ ಸಂಖ್ಯೆ 49.9 ಕೋಟಿಯಾಗಿತ್ತು. ಮೊದಲ ಓವರ್ ಅಂತ್ಯದ ವೇಳೆಗೆ ಅದು 50.3 ಕೋಟಿಗೆ ಏರಿತ್ತು ಎಂದು ಜಿಯೋ ಹಾಟ್ ಸ್ಟಾರ್ ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

10 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

10 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

10 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

11 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

12 hours ago