ಕ್ರೀಡೆ

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ 73 ರನ್‌ಗಳಿಂದ ಗೆಲುವು ಸಾಧಿಸಿ ದಾಖಲೆ ಬರೆದಿದೆ. ಪಂದ್ಯದಲ್ಲಿ ಸ್ಕಾಟ್ಲೆಂಡ್ ಗೆಲುವಿನಲ್ಲಿ ಜಾರ್ಜ್ ಮುನ್ಸೆ ಮತ್ತು ಮೈಕೆಲ್ ಲೀಸ್ಕ್ ಪ್ರಮುಖ ಪಾತ್ರವಹಿಸಿದರು. ಮುನ್ಸೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರೆ, ಲೀಸ್ಕ್ ಬೌಲಿಂಗ್‌ನಲ್ಲಿ ಮಿಂಚಿದರು.

ಮೊದಲ ಬಾರಿಗೆ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗಿಯಾಗಿರುವ ಇಟಲಿ, ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸ್ಕಾಟ್ಲೆಂಡ್‌ನ ಓಪನರ್ ಬ್ಯಾಟರ್‌ಗಳಾದ ಜಾರ್ಜ್ ಮುನ್ಸೆ (84) ಮತ್ತು ಮೈಕೆಲ್ ಜಾನ್ಸ್ (37) 126 ರನ್‌ಗಳ ಜೊತೆಯಾಟ ಆಡಿದರು. ಬ್ರೆಂಡನ್ ಮೆಕ್ಕಲಮ್ (41) ಕೂಡ ಉತ್ತಮ ಪ್ರದರ್ಶನ ನೀಡಿದರು. ಈ ಇಬ್ಬರ ಬ್ಯಾಟಿಂಗ್ ಬಲದಿಂದ ಇಡೀ ತಂಡ 4 ವಿಕೆಟ್ ನಷ್ಟಕ್ಕೆ 207 ರನ್‌ಗಳನ್ನು ಗಳಿಸಲು ಸಹಕರಿಸಿದರು.

ಈ ಗುರಿಯನ್ನು ಬೆನ್ನಟ್ಟಿದ ಇಟಲಿ ಕೇವಲ 134 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ, ಸ್ಕಾಟ್ಲೆಂಡ್ ಎರಡು ಅಂಕಗಳೊಂದಿಗೆ ತಮ್ಮ ಗುಂಪಿನಲ್ಲಿ ಎರಡನೇ ಸ್ಥಾನ ಗಳಿಸಿತು, ಆದರೆ, ಇಟಲಿ 0 ಅಂಕಗಳೊಂದಿಗೆ ಕೊನೆಯ ಸ್ಥಾನಕ್ಕೆ ತಲುಪಿತು. ಆಫ್-ಸ್ಪಿನ್ನರ್ ಲೀಸ್ಕ್ ವೃತ್ತಿಜೀವನದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. 17 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಪಡೆದು ಇಟಲಿ ತಂಡವನ್ನು ಕಟ್ಟಿಹಾಕಿದರು.

ಇಟಲಿ ಪರ ಬೆನ್ ಮಾನೆಟ್ಟಿ (52) ಮತ್ತು ಹ್ಯಾರಿ ಮಾನೆಟ್ಟಿ (37) ನಾಲ್ಕನೇ ವಿಕೆಟ್‌ಗೆ 23 ರನ್‌ಗಳ ಜೊತೆಯಾಟ ನಡೆಸಿದರು. ತಂಡದ ಯಾವುದೇ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಲೀಸ್ಕ್ ಜೊತೆಗೆ, ಸ್ಕಾಟ್ಲೆಂಡ್ ಪರ ಮಾರ್ಕ್ ವ್ಯಾಟ್ ಎರಡು ವಿಕೆಟ್‌ಗಳನ್ನು ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

46 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

47 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

49 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

51 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

56 mins ago