ಕ್ರೀಡೆ

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ 73 ರನ್‌ಗಳಿಂದ ಗೆಲುವು ಸಾಧಿಸಿ ದಾಖಲೆ ಬರೆದಿದೆ. ಪಂದ್ಯದಲ್ಲಿ ಸ್ಕಾಟ್ಲೆಂಡ್ ಗೆಲುವಿನಲ್ಲಿ ಜಾರ್ಜ್ ಮುನ್ಸೆ ಮತ್ತು ಮೈಕೆಲ್ ಲೀಸ್ಕ್ ಪ್ರಮುಖ ಪಾತ್ರವಹಿಸಿದರು. ಮುನ್ಸೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರೆ, ಲೀಸ್ಕ್ ಬೌಲಿಂಗ್‌ನಲ್ಲಿ ಮಿಂಚಿದರು.

ಮೊದಲ ಬಾರಿಗೆ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾಗಿಯಾಗಿರುವ ಇಟಲಿ, ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸ್ಕಾಟ್ಲೆಂಡ್‌ನ ಓಪನರ್ ಬ್ಯಾಟರ್‌ಗಳಾದ ಜಾರ್ಜ್ ಮುನ್ಸೆ (84) ಮತ್ತು ಮೈಕೆಲ್ ಜಾನ್ಸ್ (37) 126 ರನ್‌ಗಳ ಜೊತೆಯಾಟ ಆಡಿದರು. ಬ್ರೆಂಡನ್ ಮೆಕ್ಕಲಮ್ (41) ಕೂಡ ಉತ್ತಮ ಪ್ರದರ್ಶನ ನೀಡಿದರು. ಈ ಇಬ್ಬರ ಬ್ಯಾಟಿಂಗ್ ಬಲದಿಂದ ಇಡೀ ತಂಡ 4 ವಿಕೆಟ್ ನಷ್ಟಕ್ಕೆ 207 ರನ್‌ಗಳನ್ನು ಗಳಿಸಲು ಸಹಕರಿಸಿದರು.

ಈ ಗುರಿಯನ್ನು ಬೆನ್ನಟ್ಟಿದ ಇಟಲಿ ಕೇವಲ 134 ರನ್‌ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ, ಸ್ಕಾಟ್ಲೆಂಡ್ ಎರಡು ಅಂಕಗಳೊಂದಿಗೆ ತಮ್ಮ ಗುಂಪಿನಲ್ಲಿ ಎರಡನೇ ಸ್ಥಾನ ಗಳಿಸಿತು, ಆದರೆ, ಇಟಲಿ 0 ಅಂಕಗಳೊಂದಿಗೆ ಕೊನೆಯ ಸ್ಥಾನಕ್ಕೆ ತಲುಪಿತು. ಆಫ್-ಸ್ಪಿನ್ನರ್ ಲೀಸ್ಕ್ ವೃತ್ತಿಜೀವನದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. 17 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಪಡೆದು ಇಟಲಿ ತಂಡವನ್ನು ಕಟ್ಟಿಹಾಕಿದರು.

ಇಟಲಿ ಪರ ಬೆನ್ ಮಾನೆಟ್ಟಿ (52) ಮತ್ತು ಹ್ಯಾರಿ ಮಾನೆಟ್ಟಿ (37) ನಾಲ್ಕನೇ ವಿಕೆಟ್‌ಗೆ 23 ರನ್‌ಗಳ ಜೊತೆಯಾಟ ನಡೆಸಿದರು. ತಂಡದ ಯಾವುದೇ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಲೀಸ್ಕ್ ಜೊತೆಗೆ, ಸ್ಕಾಟ್ಲೆಂಡ್ ಪರ ಮಾರ್ಕ್ ವ್ಯಾಟ್ ಎರಡು ವಿಕೆಟ್‌ಗಳನ್ನು ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago