ನವದೆಹಲಿ : ಭಾನುವಾರದಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ ಪಂದ್ಯಕ್ಕೆ ಭಾರತದ 15 ಸದಸ್ಯರ ಕ್ರಿಕೆಟ್ ತಂಡದಲ್ಲಿ ಗಾಯಗೊಂಡಿರುವ ಜಸ್ ಪ್ರೀತ್ ಬುಮ್ರಾ ಅವರ ಸ್ಥಾನಕ್ಕೆ ಮುಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿದೆ.
ಶಮಿ ಅವರು ಈ ಮೊದಲು ಟಿ ಟ್ವೆಂಟಿ ವಿಶ್ವಕಪ್ ನ ಮೀಸಲು ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಬೆನ್ನು ನೋವಿನಿಂದಾಗಿ ಬುಮ್ರಾ ಅವರು ವಿಶ್ವಕಪ್ ನಿಂದ ಹೊರಗುಳಿದ ಹಿನ್ನೆಲೆಯಲ್ಲಿ ಶಮಿ ಅವರನ್ನು ತಂಡಕ್ಕೆ ತೆಗೆದುಕೊಳ್ಳಲಾಗಿದೆ.
ಭಾರತವು ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ವಿಶ್ವಕಪ್ ನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ.
ಐಐಸಿಸಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಯಾರೆಲ್ಲ ಇದ್ದಾರೆ
ರೋಹಿತ್ ಶರ್ಮಾ (ತಂಡದ ನಾಯಕ) ,ಕೆ ಎಲ್ ರಾಹುಲ್ (ತಂಡದ ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ, ದೀಪಕ್ ಹೂಡ, ರಿಸಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯಜುವೇಂದ್ರ ಚಹಾಲ್, ಅಕ್ಷರ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಹರ್ಷದೀಪ್ ಸಿಂಗ್, ಮುಹಮ್ಮದ್ ಶಮಿ
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…