ಕ್ರೀಡೆ

ಟಿ 20 ವಿಶ್ವಕಪ್‌ : ಅರ್ಧಶತಕ ಸಿಡಿಸಿದ ಸೂರ್ಯಕುಮಾರ್​, ರಾಹುಲ್​

ಮೆಲ್ಬೋರ್ನ್​(ಆಸ್ಟ್ರೇಲಿಯಾ): ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್​ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್​ ಯಾದವ್ ಮತ್ತು ಕೆಎಲ್​ ರಾಹುಲ್ ಅವ​ರ ಭರ್ಜರಿ ಬ್ಯಾಟಿಂಗ್​ನಿಂದಾಗಿ 20 ಓವರ್​​ಗಳಲ್ಲಿ 5 ವಿಕೆಟ್​ಗೆ 186 ರನ್​ ಗಳಿಸಿ ಸವಾಲಿನ ಗುರಿ ನೀಡಿತು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಭಾರತ, ನಾಯಕ ರೋಹಿತ್​ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್​ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್​ ಒಪ್ಪಿಸಿದರು. ಬಳಿಕ ಈ ವಿಶ್ವಕಪ್​ನ ಅತ್ಯಧಿಕ ರನ್ನರ್​ ವಿರಾಟ್​ ಕೊಹ್ಲಿ 26 ರನ್​ ಗಳಿಸಿ ಔಟಾದರು.

ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ರನ್​ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್​ ರಾಹುಲ್​ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್​ ಗಳಿಸಿ ಔಟಾಗಿದ್ದ ರಾಹುಲ್​ ಈ ಪಂದ್ಯದಲ್ಲೂ ಸಿಕ್ಸರ್​ ಸಿಡಿಸಿ 51 ರನ್​ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್​ ನೀಡಿ ಐವತ್ತರ ಆಟ ಅನುಭವಿಸಿದರು.

ಸೂರ್ಯಕುಮಾರ್​ ಯಾದವ್ ವಿಶ್ವಕಪ್​ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್​ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್​ನಲ್ಲಿ ದಾಖಲೆ ಬರೆದರು.

ಕಳಪೆ ಬ್ಯಾಟಿಂಗ್​ನಿಂದಾಗಿ ವಿಶ್ವಕಪ್​ನಲ್ಲಿ ​ ಕಾದಿದ್ದ ವಿಕೇಟ್​ ಕೀಪರ್​ ರಿಷಬ್​ ಪಂತ್​ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್​ ಕಾರ್ತಿಕ್​ ಬದಲಾಗಿ ಕಣಕ್ಕಿಳಿದ ಪಂತ್​ 3 ರನ್​ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್​ ವಿಲಿಯಮ್ಸನ್​ 2 ವಿಕೆಟ್​ ಪಡೆದು ಮಿಂಚಿದರು.

andolana

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

4 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

6 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

7 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

7 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

7 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

7 hours ago