ಕ್ರೀಡೆ

ಟಿ 20 ವಿಶ್ವಕಪ್‌ : ಅರ್ಧಶತಕ ಸಿಡಿಸಿದ ಸೂರ್ಯಕುಮಾರ್​, ರಾಹುಲ್​

ಮೆಲ್ಬೋರ್ನ್​(ಆಸ್ಟ್ರೇಲಿಯಾ): ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್​ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್​ ಯಾದವ್ ಮತ್ತು ಕೆಎಲ್​ ರಾಹುಲ್ ಅವ​ರ ಭರ್ಜರಿ ಬ್ಯಾಟಿಂಗ್​ನಿಂದಾಗಿ 20 ಓವರ್​​ಗಳಲ್ಲಿ 5 ವಿಕೆಟ್​ಗೆ 186 ರನ್​ ಗಳಿಸಿ ಸವಾಲಿನ ಗುರಿ ನೀಡಿತು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಭಾರತ, ನಾಯಕ ರೋಹಿತ್​ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್​ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್​ ಒಪ್ಪಿಸಿದರು. ಬಳಿಕ ಈ ವಿಶ್ವಕಪ್​ನ ಅತ್ಯಧಿಕ ರನ್ನರ್​ ವಿರಾಟ್​ ಕೊಹ್ಲಿ 26 ರನ್​ ಗಳಿಸಿ ಔಟಾದರು.

ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ರನ್​ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್​ ರಾಹುಲ್​ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್​ ಗಳಿಸಿ ಔಟಾಗಿದ್ದ ರಾಹುಲ್​ ಈ ಪಂದ್ಯದಲ್ಲೂ ಸಿಕ್ಸರ್​ ಸಿಡಿಸಿ 51 ರನ್​ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್​ ನೀಡಿ ಐವತ್ತರ ಆಟ ಅನುಭವಿಸಿದರು.

ಸೂರ್ಯಕುಮಾರ್​ ಯಾದವ್ ವಿಶ್ವಕಪ್​ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್​ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್​ನಲ್ಲಿ ದಾಖಲೆ ಬರೆದರು.

ಕಳಪೆ ಬ್ಯಾಟಿಂಗ್​ನಿಂದಾಗಿ ವಿಶ್ವಕಪ್​ನಲ್ಲಿ ​ ಕಾದಿದ್ದ ವಿಕೇಟ್​ ಕೀಪರ್​ ರಿಷಬ್​ ಪಂತ್​ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್​ ಕಾರ್ತಿಕ್​ ಬದಲಾಗಿ ಕಣಕ್ಕಿಳಿದ ಪಂತ್​ 3 ರನ್​ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್​ ವಿಲಿಯಮ್ಸನ್​ 2 ವಿಕೆಟ್​ ಪಡೆದು ಮಿಂಚಿದರು.

andolana

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

4 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

8 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

8 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

8 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

8 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

9 hours ago