ಮೆಲ್ಬೋರ್ನ್(ಆಸ್ಟ್ರೇಲಿಯಾ): ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ನಿಂದಾಗಿ 20 ಓವರ್ಗಳಲ್ಲಿ 5 ವಿಕೆಟ್ಗೆ 186 ರನ್ ಗಳಿಸಿ ಸವಾಲಿನ ಗುರಿ ನೀಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ, ನಾಯಕ ರೋಹಿತ್ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದರು. ಬಳಿಕ ಈ ವಿಶ್ವಕಪ್ನ ಅತ್ಯಧಿಕ ರನ್ನರ್ ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ವಿಶ್ವಕಪ್ನ ಆರಂಭಿಕ ಪಂದ್ಯಗಳಲ್ಲಿ ರನ್ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್ ಗಳಿಸಿ ಔಟಾಗಿದ್ದ ರಾಹುಲ್ ಈ ಪಂದ್ಯದಲ್ಲೂ ಸಿಕ್ಸರ್ ಸಿಡಿಸಿ 51 ರನ್ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್ ನೀಡಿ ಐವತ್ತರ ಆಟ ಅನುಭವಿಸಿದರು.
ಸೂರ್ಯಕುಮಾರ್ ಯಾದವ್ ವಿಶ್ವಕಪ್ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್ನಲ್ಲಿ ದಾಖಲೆ ಬರೆದರು.
ಕಳಪೆ ಬ್ಯಾಟಿಂಗ್ನಿಂದಾಗಿ ವಿಶ್ವಕಪ್ನಲ್ಲಿ ಕಾದಿದ್ದ ವಿಕೇಟ್ ಕೀಪರ್ ರಿಷಬ್ ಪಂತ್ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್ ಕಾರ್ತಿಕ್ ಬದಲಾಗಿ ಕಣಕ್ಕಿಳಿದ ಪಂತ್ 3 ರನ್ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್ ವಿಲಿಯಮ್ಸನ್ 2 ವಿಕೆಟ್ ಪಡೆದು ಮಿಂಚಿದರು.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…