ಮೆಲ್ಬೋರ್ನ್(ಆಸ್ಟ್ರೇಲಿಯಾ): ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ನಿಂದಾಗಿ 20 ಓವರ್ಗಳಲ್ಲಿ 5 ವಿಕೆಟ್ಗೆ 186 ರನ್ ಗಳಿಸಿ ಸವಾಲಿನ ಗುರಿ ನೀಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ, ನಾಯಕ ರೋಹಿತ್ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದರು. ಬಳಿಕ ಈ ವಿಶ್ವಕಪ್ನ ಅತ್ಯಧಿಕ ರನ್ನರ್ ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ವಿಶ್ವಕಪ್ನ ಆರಂಭಿಕ ಪಂದ್ಯಗಳಲ್ಲಿ ರನ್ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್ ಗಳಿಸಿ ಔಟಾಗಿದ್ದ ರಾಹುಲ್ ಈ ಪಂದ್ಯದಲ್ಲೂ ಸಿಕ್ಸರ್ ಸಿಡಿಸಿ 51 ರನ್ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್ ನೀಡಿ ಐವತ್ತರ ಆಟ ಅನುಭವಿಸಿದರು.
ಸೂರ್ಯಕುಮಾರ್ ಯಾದವ್ ವಿಶ್ವಕಪ್ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್ನಲ್ಲಿ ದಾಖಲೆ ಬರೆದರು.
ಕಳಪೆ ಬ್ಯಾಟಿಂಗ್ನಿಂದಾಗಿ ವಿಶ್ವಕಪ್ನಲ್ಲಿ ಕಾದಿದ್ದ ವಿಕೇಟ್ ಕೀಪರ್ ರಿಷಬ್ ಪಂತ್ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್ ಕಾರ್ತಿಕ್ ಬದಲಾಗಿ ಕಣಕ್ಕಿಳಿದ ಪಂತ್ 3 ರನ್ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್ ವಿಲಿಯಮ್ಸನ್ 2 ವಿಕೆಟ್ ಪಡೆದು ಮಿಂಚಿದರು.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…