ಕ್ರೀಡೆ

ಟಿ 20 ವಿಶ್ವಕಪ್‌ : ಅರ್ಧಶತಕ ಸಿಡಿಸಿದ ಸೂರ್ಯಕುಮಾರ್​, ರಾಹುಲ್​

ಮೆಲ್ಬೋರ್ನ್​(ಆಸ್ಟ್ರೇಲಿಯಾ): ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್​ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್​ ಯಾದವ್ ಮತ್ತು ಕೆಎಲ್​ ರಾಹುಲ್ ಅವ​ರ ಭರ್ಜರಿ ಬ್ಯಾಟಿಂಗ್​ನಿಂದಾಗಿ 20 ಓವರ್​​ಗಳಲ್ಲಿ 5 ವಿಕೆಟ್​ಗೆ 186 ರನ್​ ಗಳಿಸಿ ಸವಾಲಿನ ಗುರಿ ನೀಡಿತು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಭಾರತ, ನಾಯಕ ರೋಹಿತ್​ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್​ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್​ ಒಪ್ಪಿಸಿದರು. ಬಳಿಕ ಈ ವಿಶ್ವಕಪ್​ನ ಅತ್ಯಧಿಕ ರನ್ನರ್​ ವಿರಾಟ್​ ಕೊಹ್ಲಿ 26 ರನ್​ ಗಳಿಸಿ ಔಟಾದರು.

ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ರನ್​ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್​ ರಾಹುಲ್​ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್​ ಗಳಿಸಿ ಔಟಾಗಿದ್ದ ರಾಹುಲ್​ ಈ ಪಂದ್ಯದಲ್ಲೂ ಸಿಕ್ಸರ್​ ಸಿಡಿಸಿ 51 ರನ್​ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್​ ನೀಡಿ ಐವತ್ತರ ಆಟ ಅನುಭವಿಸಿದರು.

ಸೂರ್ಯಕುಮಾರ್​ ಯಾದವ್ ವಿಶ್ವಕಪ್​ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್​ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್​ನಲ್ಲಿ ದಾಖಲೆ ಬರೆದರು.

ಕಳಪೆ ಬ್ಯಾಟಿಂಗ್​ನಿಂದಾಗಿ ವಿಶ್ವಕಪ್​ನಲ್ಲಿ ​ ಕಾದಿದ್ದ ವಿಕೇಟ್​ ಕೀಪರ್​ ರಿಷಬ್​ ಪಂತ್​ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್​ ಕಾರ್ತಿಕ್​ ಬದಲಾಗಿ ಕಣಕ್ಕಿಳಿದ ಪಂತ್​ 3 ರನ್​ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್​ ವಿಲಿಯಮ್ಸನ್​ 2 ವಿಕೆಟ್​ ಪಡೆದು ಮಿಂಚಿದರು.

andolana

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

39 mins ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

3 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

3 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

3 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

7 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

9 hours ago