ಮೆಲ್ಬೋರ್ನ್(ಆಸ್ಟ್ರೇಲಿಯಾ): ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ನಿಂದಾಗಿ 20 ಓವರ್ಗಳಲ್ಲಿ 5 ವಿಕೆಟ್ಗೆ 186 ರನ್ ಗಳಿಸಿ ಸವಾಲಿನ ಗುರಿ ನೀಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ, ನಾಯಕ ರೋಹಿತ್ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದರು. ಬಳಿಕ ಈ ವಿಶ್ವಕಪ್ನ ಅತ್ಯಧಿಕ ರನ್ನರ್ ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ವಿಶ್ವಕಪ್ನ ಆರಂಭಿಕ ಪಂದ್ಯಗಳಲ್ಲಿ ರನ್ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್ ಗಳಿಸಿ ಔಟಾಗಿದ್ದ ರಾಹುಲ್ ಈ ಪಂದ್ಯದಲ್ಲೂ ಸಿಕ್ಸರ್ ಸಿಡಿಸಿ 51 ರನ್ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್ ನೀಡಿ ಐವತ್ತರ ಆಟ ಅನುಭವಿಸಿದರು.
ಸೂರ್ಯಕುಮಾರ್ ಯಾದವ್ ವಿಶ್ವಕಪ್ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್ನಲ್ಲಿ ದಾಖಲೆ ಬರೆದರು.
ಕಳಪೆ ಬ್ಯಾಟಿಂಗ್ನಿಂದಾಗಿ ವಿಶ್ವಕಪ್ನಲ್ಲಿ ಕಾದಿದ್ದ ವಿಕೇಟ್ ಕೀಪರ್ ರಿಷಬ್ ಪಂತ್ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್ ಕಾರ್ತಿಕ್ ಬದಲಾಗಿ ಕಣಕ್ಕಿಳಿದ ಪಂತ್ 3 ರನ್ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್ ವಿಲಿಯಮ್ಸನ್ 2 ವಿಕೆಟ್ ಪಡೆದು ಮಿಂಚಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…