ಕ್ರೀಡೆ

ಟಿ 20 ವಿಶ್ವಕಪ್‌ : ಅರ್ಧಶತಕ ಸಿಡಿಸಿದ ಸೂರ್ಯಕುಮಾರ್​, ರಾಹುಲ್​

ಮೆಲ್ಬೋರ್ನ್​(ಆಸ್ಟ್ರೇಲಿಯಾ): ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್​ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್​ ಯಾದವ್ ಮತ್ತು ಕೆಎಲ್​ ರಾಹುಲ್ ಅವ​ರ ಭರ್ಜರಿ ಬ್ಯಾಟಿಂಗ್​ನಿಂದಾಗಿ 20 ಓವರ್​​ಗಳಲ್ಲಿ 5 ವಿಕೆಟ್​ಗೆ 186 ರನ್​ ಗಳಿಸಿ ಸವಾಲಿನ ಗುರಿ ನೀಡಿತು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡ ಭಾರತ, ನಾಯಕ ರೋಹಿತ್​ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್​ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್​ ಒಪ್ಪಿಸಿದರು. ಬಳಿಕ ಈ ವಿಶ್ವಕಪ್​ನ ಅತ್ಯಧಿಕ ರನ್ನರ್​ ವಿರಾಟ್​ ಕೊಹ್ಲಿ 26 ರನ್​ ಗಳಿಸಿ ಔಟಾದರು.

ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ರನ್​ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್​ ರಾಹುಲ್​ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್​ ಗಳಿಸಿ ಔಟಾಗಿದ್ದ ರಾಹುಲ್​ ಈ ಪಂದ್ಯದಲ್ಲೂ ಸಿಕ್ಸರ್​ ಸಿಡಿಸಿ 51 ರನ್​ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್​ ನೀಡಿ ಐವತ್ತರ ಆಟ ಅನುಭವಿಸಿದರು.

ಸೂರ್ಯಕುಮಾರ್​ ಯಾದವ್ ವಿಶ್ವಕಪ್​ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್​ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್​ನಲ್ಲಿ ದಾಖಲೆ ಬರೆದರು.

ಕಳಪೆ ಬ್ಯಾಟಿಂಗ್​ನಿಂದಾಗಿ ವಿಶ್ವಕಪ್​ನಲ್ಲಿ ​ ಕಾದಿದ್ದ ವಿಕೇಟ್​ ಕೀಪರ್​ ರಿಷಬ್​ ಪಂತ್​ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್​ ಕಾರ್ತಿಕ್​ ಬದಲಾಗಿ ಕಣಕ್ಕಿಳಿದ ಪಂತ್​ 3 ರನ್​ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್​ ವಿಲಿಯಮ್ಸನ್​ 2 ವಿಕೆಟ್​ ಪಡೆದು ಮಿಂಚಿದರು.

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago