ಮೆಲ್ಬೋರ್ನ್(ಆಸ್ಟ್ರೇಲಿಯಾ): ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ನಿಂದಾಗಿ 20 ಓವರ್ಗಳಲ್ಲಿ 5 ವಿಕೆಟ್ಗೆ 186 ರನ್ ಗಳಿಸಿ ಸವಾಲಿನ ಗುರಿ ನೀಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ, ನಾಯಕ ರೋಹಿತ್ ಶರ್ಮಾರನ್ನು ಬೇಗ ಕಳೆದುಕೊಂಡಿತು. 15 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ರೋಹಿತ್ ಭರ್ಜರಿ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಒಪ್ಪಿಸಿದರು. ಬಳಿಕ ಈ ವಿಶ್ವಕಪ್ನ ಅತ್ಯಧಿಕ ರನ್ನರ್ ವಿರಾಟ್ ಕೊಹ್ಲಿ 26 ರನ್ ಗಳಿಸಿ ಔಟಾದರು.
ವಿಶ್ವಕಪ್ನ ಆರಂಭಿಕ ಪಂದ್ಯಗಳಲ್ಲಿ ರನ್ಗಳಿಸದೇ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆಎಲ್ ರಾಹುಲ್ ಸತತ 2 ನೇ ಅರ್ಧಶತಕ ಗಳಿಸಿದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 50 ರನ್ ಗಳಿಸಿ ಔಟಾಗಿದ್ದ ರಾಹುಲ್ ಈ ಪಂದ್ಯದಲ್ಲೂ ಸಿಕ್ಸರ್ ಸಿಡಿಸಿ 51 ರನ್ ಗಳಿಸಿದರು. ಮರು ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟಾದರು. ಎರಡು ಬಾರಿಯೂ ಅರ್ಧಶತಕ ಗಳಿಸಿದ ಮರು ಎಸೆತದಲ್ಲೇ ವಿಕೆಟ್ ನೀಡಿ ಐವತ್ತರ ಆಟ ಅನುಭವಿಸಿದರು.
ಸೂರ್ಯಕುಮಾರ್ ಯಾದವ್ ವಿಶ್ವಕಪ್ನಲ್ಲಿ ವೇಗದ ಫಿಫ್ಟಿ ಬಾರಿಸಿದ ಭಾರತದ 4ನೇ ಆಟಗಾರ ಮತ್ತು ಈ ಸಾಲಿನಲ್ಲಿ ಮೂರನೇ ಅರ್ಧಶತಕ ಬಾರಿಸಿದರು. ವಿರಾಟ್ ಕೊಹ್ಲಿ ಔಟಾದ ಬಳಿಕ ಮೈದಾನಕ್ಕಿಳಿದ ಸೂರ್ಯ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟಕ್ಕಿಳಿದರು. 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ವಿಶ್ವಕಪ್ನಲ್ಲಿ ದಾಖಲೆ ಬರೆದರು.
ಕಳಪೆ ಬ್ಯಾಟಿಂಗ್ನಿಂದಾಗಿ ವಿಶ್ವಕಪ್ನಲ್ಲಿ ಕಾದಿದ್ದ ವಿಕೇಟ್ ಕೀಪರ್ ರಿಷಬ್ ಪಂತ್ಗೆ ಜಿಂಬಾಬ್ವೆ ವಿರುದ್ಧ ಅವಕಾಶ ಮಾಡಿಕೊಡಲಾಯಿತು. ದಿನೇಶ್ ಕಾರ್ತಿಕ್ ಬದಲಾಗಿ ಕಣಕ್ಕಿಳಿದ ಪಂತ್ 3 ರನ್ ಗಳಿಸಿ ಔಟಾಗಿ ಕಳಪೆ ಆಟ ಮುಂದುವರಿಸಿದರು. ಜಿಂಬಾಬ್ವೆ ಪರವಾಗಿ ಸೀನ್ ವಿಲಿಯಮ್ಸನ್ 2 ವಿಕೆಟ್ ಪಡೆದು ಮಿಂಚಿದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…