ಕ್ರೀಡೆ

ಟಿ20 ವಿಶ್ವಕಪ್‌ : ಟೀಮ್‌ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ

ಏಷ್ಯಾಕಪ್ ಮುಕ್ತಾಯಕೊಂಡಿದೆ. ಇನ್ನು ಟೀಮ್ ಇಂಡಿಯಾ ಮುಂದಿರುವುದು ಟಿ20 ವಿಶ್ವಕಪ್​. ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ಶುರುವಾಗಲಿರುವ ಈ ಟೂರ್ನಿಗೂ ಮುನ್ನ ಭಾರತ ತಂಡ 2 ಸರಣಿಗಳನ್ನೂ ಕೂಡ ಆಡಲಿರುವುದು ವಿಶೇಷ. ಅಂದರೆ ಇದೇ ತಿಂಗಳು ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ದ ಟಿ20 ಸರಣಿ ಆಡಲಿದೆ. ಇದರ ಬೆನ್ನಲ್ಲೇ ಸೌತ್ ಆಫ್ರಿಕಾ ವಿರುದ್ಧ ಏಕದಿನ ಹಾಗೂ ಟಿ20 ಪಂದ್ಯಗಳನ್ನಾಡಲಿದೆ. ಈ ಎರಡೂ ಸರಣಿಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಅದರಲ್ಲೂ ಟಿ20 ವಿಶ್ವಕಪ್​ನ ಪೂರ್ವ ತಯಾರಿಗಾಗಿ ಈ ಸರಣಿಗಳನ್ನು ಆಯೋಜಿಸಲಾಗುತ್ತಿದೆ. ಹೀಗಾಗಿಯೇ ಈ ಸರಣಿಗೆ ಆಯ್ಕೆಯಾಗುವ ಟಿ20 ತಂಡವೇ ( India Squad For T20 World Cup 2022) ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದೆ.

ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ತಂಡದ ಆಯ್ಕೆಗೆ ಸಭೆ ಸೇರಿದ್ದಾರೆ. ಅಲ್ಲದೆ ಈಗಾಗಲೇ ಬಹುತೇಕ ಆಟಗಾರರು ಫಿಕ್ಸ್​ ಆಗಿದ್ದಾರೆ. ಅಂದರೆ ಈ ಬಾರಿ ಏಷ್ಯಾಕಪ್​ಗೆ ಆಯ್ಕೆಯಾಗಿದ್ದ ಬಹುತೇಕ ಆಟಗಾರರು ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯಲಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಶೇ.95 ರಷ್ಟು ತಂಡ ಫಿಕ್ಸ್ ಆಗಿದೆ ಎಂದಿದ್ದರು.

ಇದಾಗ್ಯೂ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ವಾಪಸಾತಿಯಿಂದ ತಂಡದಲ್ಲಿ ಮಹತ್ವದ ಬದಲಾವಣೆಯಂತು ಆಗಲಿದೆ. ಹಾಗೆಯೇ ರವೀಂದ್ರ ಜಡೇಜಾ ಗಾಯಗೊಂಡಿರುವ ಕಾರಣ ತಂಡದಲ್ಲಿ ಮತ್ತೋರ್ವ ಆಲ್​ರೌಂಡರ್ ಸ್ಥಾನ ಪಡೆಯಲಿದ್ದಾರೆ. ಅಂದರೆ ಮೂರು ಬದಲಾವಣೆ ಖಚಿತ ಎಂದೇ ಹೇಳಬಹುದು.

ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಮುಂಬರುವ 2 ಸರಣಿಗಳಿಗೆ ಒಟ್ಟು 18 ಸದಸ್ಯರ ತಂಡವನ್ನು ಈ ಬಾರಿ ಆಯ್ಕೆ ಮಾಡಲಿದ್ದಾರೆ. ಇವರಲ್ಲಿ 15 ಸದಸ್ಯರನ್ನು ಟಿ20 ವಿಶ್ವಕಪ್​ನಲ್ಲಿ ಆಯ್ಕೆ ಮಾಡಲಿದ್ದು, ಮೂವರನ್ನು ಮೀಸಲು ಆಟಗಾರರನ್ನಾಗಿರಿಸಲಿದೆ.

ಅದರಂತೆ ಟೀಮ್ ಇಂಡಿಯಾದ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಆಲ್​ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆಯುವುದು ಖಚಿತ.

ಇನ್ನು ವಿಕೆಟ್​ ಕೀಪರ್​ಗಳಾಗಿ ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್​ಗೆ ಆಯ್ಕೆಯಾಗಬಹುದು. ಹಾಗೆಯೇ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಹರ್ಷಲ್ ಪಟೇಲ್ ಹಾಗೂ ಭುವನೇಶ್ವರ್ ಕುಮಾರ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅಲ್ಲದೆ ಹೆಚ್ಚುವರಿ ವೇಗಿಗಳಾಗಿ ಅರ್ಷದೀಪ್ ಸಿಂಗ್ ಹಾಗೂ ದೀಪಕ್ ಚಹರ್ ತಂಡದಲ್ಲಿರಲಿದ್ದಾರೆ. ಇದಾಗ್ಯೂ ರವೀಂದ್ರ ಜಡೇಜಾ ಬದಲಿಗೆ ತಂಡಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದೇ ಪ್ರಶ್ನೆ.

ಈ ಪಟ್ಟಿಯಲ್ಲಿ ಆಲ್​ರೌಂಡರ್​ಗಳಾಗಿ ದೀಪಕ್ ಹೂಡ ಹಾಗೂ ಅಕ್ಷರ್ ಪಟೇಲ್ ಹೆಸರು ಮುಂಚೂಣಿಯಲ್ಲಿದೆ. ಹೀಗಾಗಿ ಇವರಿಬ್ಬರೂ ಕೂಡ 18 ಸದಸ್ಯರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಟಿ20 ವಿಶ್ವಕಪ್ ತಂಡ ಹೀಗಿದೆ.

  1. ರೋಹಿತ್ ಶರ್ಮಾ (ನಾಯಕ)
  2. ಕೆಎಲ್ ರಾಹುಲ್‌
  3. ವಿರಾಟ್ ಕೊಹ್ಲಿ
  4. ಸೂರ್ಯಕುಮಾರ್ ಯಾದವ್
  5. ಹಾರ್ದಿಕ್ ಪಾಂಡ್ಯ
  6. ರಿಷಭ್ ಪಂತ್ (ವಿಕೆಟ್ ಕೀಪರ್)
  7. ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್)
  8. ಯುಜ್ವೇಂದ್ರ ಚಾಹಲ್
  9. ಭುವನೇಶ್ವರ್ ಕುಮಾರ್
  10. ಜಸ್ಪ್ರೀತ್ ಬುಮ್ರಾ
  11. ಹರ್ಷಲ್ ಪಟೇಲ್
  12. ಅರ್ಶ್ದೀಪ್ ಸಿಂಗ್
  13. ದೀಪಕ್ ಚಹಾರ್
  14. ಅಕ್ಷರ್ ಪಟೇಲ್
  15. ದೀಪಕ್ ಹೂಡಾ
  16. ರವಿ ಬಿಷ್ಣೋಯ್
  17. ರವಿಚಂದ್ರನ್ ಅಶ್ವಿನ್.
  18. ಶ್ರೇಯಸ್ ಅಯ್ಯರ್.
andolana

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

2 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

2 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

2 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

2 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

24 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

24 hours ago