ಕ್ರೀಡೆ

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು ವಿಕೆಟ್‌ಗಳ ಅಂತರದಿಂದ ಮಣಿಸಿತು.

ಆರಂಭಿಕ ಆಟಗಾರ ಆರ್ಯಾಂಶ್ ಶರ್ಮಾ(ಔಟಾಗದೆ 74, 53 ಎಸೆತ, 6 ಬೌಂಡರಿ, 3 ಸಿಕ್ಸರ್)ಹಾಗೂ ಶುಐಬ್ ಖಾನ್(ಔಟಾಗದೆ 51, 29 ಎಸೆತ, 4 ಬೌಂಡರಿ, 4 ಸಿಕ್ಸರ್)ಅರ್ಧಶತಕದ ಕೊಡುಗೆ, ಜುನೈದ್ ಸಿದ್ದೀಕ್ ಅಮೋಘ ಬೌಲಿಂಗ್ ನೆರವಿನಿಂದ ಯುಎಇ ತಂಡ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಡಿರುವ 8 ಪಂದ್ಯಗಳ ಪೈಕಿ ಎರಡನೇ ಗೆಲುವು ದಾಖಲಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೆನಡಾ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 150 ರನ್ ಗಳಿಸಿತು. 5.1 ಓವರ್‌ಗಳಲ್ಲಿ 38 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡ ಕೆನಡಾ ತಂಡ ಕಳಪೆ ಆರಂಭ ಪಡೆದಿತ್ತು. ಆಗ ಜೊತೆಯಾದ ಹರ್ಷ ಥಾಕರ್(50 ರನ್, 41 ಎಸೆತ, 2 ಬೌಂಡರಿ, 3 ಸಿಕ್ಸರ್)ಹಾಗೂ ನವನೀತ್ ಧಲಿವಾಲ್(34 ರನ್, 28 ಎಸೆತ, 4 ಬೌಂಡರಿ)ನಾಲ್ಕನೇ ವಿಕೆಟ್‌ಗೆ 58ರನ್ ಸೇರಿಸಿ ತಂಡಕ್ಕೆ ಆಧಾರವಾದರು. ವಿಕೆಟ್ ಕೀಪರ್ ಶ್ರೇಯಸ್ ಮೊವಾ(21 ರನ್, 21 ಎಸೆತ)ತಂಡದ ಮೊತ್ತ 150ಕ್ಕೆ ತಲುಪುವಲ್ಲಿ ನೆರವಾದರು.

ಪಂದ್ಯದಲ್ಲಿ ಗೆಲ್ಲಲು 151 ರನ್ ಗುರಿ ಬೆನ್ನಟ್ಟಿದ ಯುಎಇ ತಂಡವು 19.4 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 151 ರನ್ ಗಳಿಸಿತು. ಯುಎಇ ತಂಡವು 12.3 ಓವರ್‌ಗಳಲ್ಲಿ 66 ರನ್ ಸೇರಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ನಾಲ್ವರು ಬ್ಯಾಟರ್‌ಗಳನ್ನು ಕಳೆದುಕೊಂಡಿತು. ಆಗ ಜೊತೆಯಾದ ಆರ್ಯಾಂಶ್ ಹಾಗೂ ಶುಐಬ್ ಖಾನ್ ಐದನೇ ವಿಕೆಟ್‌ಗೆ ಕೇವಲ 42 ಎಸೆತಗಳಲ್ಲಿ 84 ರನ್ ಜೊತೆಯಾಟದಲ್ಲಿ ಭಾಗಿಯಾಗಿ ಯುಎಇ ತಂಡಕ್ಕೆ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ರೋಚಕ ಜಯ ತಂದುಕೊಟ್ಟರು. 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶುಐಬ್ ಖಾನ್ ಪಂದ್ಯದ ಚಿತ್ರಣ ಬದಲಿಸಿದರು. ನಾಯಕ ಮುಹಮ್ಮದ್ ವಸೀಂ(4 ರನ್), ಅಲಿಶನ್ ಶರಾಫು(5 ರನ್), ಮಯಾಂಕ್ ಕುಮಾರ್(4 ರನ್)ಹಾಗೂ ಹರ್ಷಿತ್ ಕೌಶಿಕ್(5 ರನ್)ಅಲ್ಪ ಮೊತ್ತಕ್ಕೆ ಔಟಾದರು. ಕೆನಡಾದ ಪರವಾಗಿ ಸಾದ್ ಬಿನ್ ಝಾಫರ್(3-14)ಯಶಸ್ವಿ ಪ್ರದರ್ಶನ ನೀಡಿದರು. ತಂಡದ ಪರವಾಗಿ ಜುನೈದ್ ಸಿದ್ದೀಕಿ(5-35)ಐದು ವಿಕೆಟ್ ಕಬಳಿಸುವ ಮೂಲಕ ಟಿ-20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಯುಎಇ ತಂಡದ ಮೂರನೇ ಬೌಲರ್ ಎನಿಸಿಕೊಂಡರು. ಅಹ್ಮದ್ ರಝಾ(5-19)ಹಾಗೂ ಝುಬೈರ್ (5-21)ಈ ಸಾಧನೆ ಮಾಡಿದ್ದ ಇನ್ನಿಬ್ಬರು ಬೌಲರ್‌ಗಳಾಗಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

7 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

20 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

20 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

20 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

20 hours ago