ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು ವಿಕೆಟ್ಗಳ ಅಂತರದಿಂದ ಮಣಿಸಿತು.
ಆರಂಭಿಕ ಆಟಗಾರ ಆರ್ಯಾಂಶ್ ಶರ್ಮಾ(ಔಟಾಗದೆ 74, 53 ಎಸೆತ, 6 ಬೌಂಡರಿ, 3 ಸಿಕ್ಸರ್)ಹಾಗೂ ಶುಐಬ್ ಖಾನ್(ಔಟಾಗದೆ 51, 29 ಎಸೆತ, 4 ಬೌಂಡರಿ, 4 ಸಿಕ್ಸರ್)ಅರ್ಧಶತಕದ ಕೊಡುಗೆ, ಜುನೈದ್ ಸಿದ್ದೀಕ್ ಅಮೋಘ ಬೌಲಿಂಗ್ ನೆರವಿನಿಂದ ಯುಎಇ ತಂಡ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಡಿರುವ 8 ಪಂದ್ಯಗಳ ಪೈಕಿ ಎರಡನೇ ಗೆಲುವು ದಾಖಲಿಸಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೆನಡಾ ತಂಡವು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗಳ ನಷ್ಟಕ್ಕೆ 150 ರನ್ ಗಳಿಸಿತು. 5.1 ಓವರ್ಗಳಲ್ಲಿ 38 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್ಗಳನ್ನು ಕಳೆದುಕೊಂಡ ಕೆನಡಾ ತಂಡ ಕಳಪೆ ಆರಂಭ ಪಡೆದಿತ್ತು. ಆಗ ಜೊತೆಯಾದ ಹರ್ಷ ಥಾಕರ್(50 ರನ್, 41 ಎಸೆತ, 2 ಬೌಂಡರಿ, 3 ಸಿಕ್ಸರ್)ಹಾಗೂ ನವನೀತ್ ಧಲಿವಾಲ್(34 ರನ್, 28 ಎಸೆತ, 4 ಬೌಂಡರಿ)ನಾಲ್ಕನೇ ವಿಕೆಟ್ಗೆ 58ರನ್ ಸೇರಿಸಿ ತಂಡಕ್ಕೆ ಆಧಾರವಾದರು. ವಿಕೆಟ್ ಕೀಪರ್ ಶ್ರೇಯಸ್ ಮೊವಾ(21 ರನ್, 21 ಎಸೆತ)ತಂಡದ ಮೊತ್ತ 150ಕ್ಕೆ ತಲುಪುವಲ್ಲಿ ನೆರವಾದರು.
ಪಂದ್ಯದಲ್ಲಿ ಗೆಲ್ಲಲು 151 ರನ್ ಗುರಿ ಬೆನ್ನಟ್ಟಿದ ಯುಎಇ ತಂಡವು 19.4 ಓವರ್ಗಳಲ್ಲಿ 5 ವಿಕೆಟ್ಗಳ ನಷ್ಟಕ್ಕೆ 151 ರನ್ ಗಳಿಸಿತು. ಯುಎಇ ತಂಡವು 12.3 ಓವರ್ಗಳಲ್ಲಿ 66 ರನ್ ಸೇರಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ನಾಲ್ವರು ಬ್ಯಾಟರ್ಗಳನ್ನು ಕಳೆದುಕೊಂಡಿತು. ಆಗ ಜೊತೆಯಾದ ಆರ್ಯಾಂಶ್ ಹಾಗೂ ಶುಐಬ್ ಖಾನ್ ಐದನೇ ವಿಕೆಟ್ಗೆ ಕೇವಲ 42 ಎಸೆತಗಳಲ್ಲಿ 84 ರನ್ ಜೊತೆಯಾಟದಲ್ಲಿ ಭಾಗಿಯಾಗಿ ಯುಎಇ ತಂಡಕ್ಕೆ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ರೋಚಕ ಜಯ ತಂದುಕೊಟ್ಟರು. 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶುಐಬ್ ಖಾನ್ ಪಂದ್ಯದ ಚಿತ್ರಣ ಬದಲಿಸಿದರು. ನಾಯಕ ಮುಹಮ್ಮದ್ ವಸೀಂ(4 ರನ್), ಅಲಿಶನ್ ಶರಾಫು(5 ರನ್), ಮಯಾಂಕ್ ಕುಮಾರ್(4 ರನ್)ಹಾಗೂ ಹರ್ಷಿತ್ ಕೌಶಿಕ್(5 ರನ್)ಅಲ್ಪ ಮೊತ್ತಕ್ಕೆ ಔಟಾದರು. ಕೆನಡಾದ ಪರವಾಗಿ ಸಾದ್ ಬಿನ್ ಝಾಫರ್(3-14)ಯಶಸ್ವಿ ಪ್ರದರ್ಶನ ನೀಡಿದರು. ತಂಡದ ಪರವಾಗಿ ಜುನೈದ್ ಸಿದ್ದೀಕಿ(5-35)ಐದು ವಿಕೆಟ್ ಕಬಳಿಸುವ ಮೂಲಕ ಟಿ-20 ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಯುಎಇ ತಂಡದ ಮೂರನೇ ಬೌಲರ್ ಎನಿಸಿಕೊಂಡರು. ಅಹ್ಮದ್ ರಝಾ(5-19)ಹಾಗೂ ಝುಬೈರ್ (5-21)ಈ ಸಾಧನೆ ಮಾಡಿದ್ದ ಇನ್ನಿಬ್ಬರು ಬೌಲರ್ಗಳಾಗಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…