ಕ್ರೀಡೆ

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು ವಿಕೆಟ್‌ಗಳ ಅಂತರದಿಂದ ಮಣಿಸಿತು.

ಆರಂಭಿಕ ಆಟಗಾರ ಆರ್ಯಾಂಶ್ ಶರ್ಮಾ(ಔಟಾಗದೆ 74, 53 ಎಸೆತ, 6 ಬೌಂಡರಿ, 3 ಸಿಕ್ಸರ್)ಹಾಗೂ ಶುಐಬ್ ಖಾನ್(ಔಟಾಗದೆ 51, 29 ಎಸೆತ, 4 ಬೌಂಡರಿ, 4 ಸಿಕ್ಸರ್)ಅರ್ಧಶತಕದ ಕೊಡುಗೆ, ಜುನೈದ್ ಸಿದ್ದೀಕ್ ಅಮೋಘ ಬೌಲಿಂಗ್ ನೆರವಿನಿಂದ ಯುಎಇ ತಂಡ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಆಡಿರುವ 8 ಪಂದ್ಯಗಳ ಪೈಕಿ ಎರಡನೇ ಗೆಲುವು ದಾಖಲಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೆನಡಾ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 150 ರನ್ ಗಳಿಸಿತು. 5.1 ಓವರ್‌ಗಳಲ್ಲಿ 38 ರನ್ ಗಳಿಸುವಷ್ಟರಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡ ಕೆನಡಾ ತಂಡ ಕಳಪೆ ಆರಂಭ ಪಡೆದಿತ್ತು. ಆಗ ಜೊತೆಯಾದ ಹರ್ಷ ಥಾಕರ್(50 ರನ್, 41 ಎಸೆತ, 2 ಬೌಂಡರಿ, 3 ಸಿಕ್ಸರ್)ಹಾಗೂ ನವನೀತ್ ಧಲಿವಾಲ್(34 ರನ್, 28 ಎಸೆತ, 4 ಬೌಂಡರಿ)ನಾಲ್ಕನೇ ವಿಕೆಟ್‌ಗೆ 58ರನ್ ಸೇರಿಸಿ ತಂಡಕ್ಕೆ ಆಧಾರವಾದರು. ವಿಕೆಟ್ ಕೀಪರ್ ಶ್ರೇಯಸ್ ಮೊವಾ(21 ರನ್, 21 ಎಸೆತ)ತಂಡದ ಮೊತ್ತ 150ಕ್ಕೆ ತಲುಪುವಲ್ಲಿ ನೆರವಾದರು.

ಪಂದ್ಯದಲ್ಲಿ ಗೆಲ್ಲಲು 151 ರನ್ ಗುರಿ ಬೆನ್ನಟ್ಟಿದ ಯುಎಇ ತಂಡವು 19.4 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 151 ರನ್ ಗಳಿಸಿತು. ಯುಎಇ ತಂಡವು 12.3 ಓವರ್‌ಗಳಲ್ಲಿ 66 ರನ್ ಸೇರಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ನಾಲ್ವರು ಬ್ಯಾಟರ್‌ಗಳನ್ನು ಕಳೆದುಕೊಂಡಿತು. ಆಗ ಜೊತೆಯಾದ ಆರ್ಯಾಂಶ್ ಹಾಗೂ ಶುಐಬ್ ಖಾನ್ ಐದನೇ ವಿಕೆಟ್‌ಗೆ ಕೇವಲ 42 ಎಸೆತಗಳಲ್ಲಿ 84 ರನ್ ಜೊತೆಯಾಟದಲ್ಲಿ ಭಾಗಿಯಾಗಿ ಯುಎಇ ತಂಡಕ್ಕೆ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ರೋಚಕ ಜಯ ತಂದುಕೊಟ್ಟರು. 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶುಐಬ್ ಖಾನ್ ಪಂದ್ಯದ ಚಿತ್ರಣ ಬದಲಿಸಿದರು. ನಾಯಕ ಮುಹಮ್ಮದ್ ವಸೀಂ(4 ರನ್), ಅಲಿಶನ್ ಶರಾಫು(5 ರನ್), ಮಯಾಂಕ್ ಕುಮಾರ್(4 ರನ್)ಹಾಗೂ ಹರ್ಷಿತ್ ಕೌಶಿಕ್(5 ರನ್)ಅಲ್ಪ ಮೊತ್ತಕ್ಕೆ ಔಟಾದರು. ಕೆನಡಾದ ಪರವಾಗಿ ಸಾದ್ ಬಿನ್ ಝಾಫರ್(3-14)ಯಶಸ್ವಿ ಪ್ರದರ್ಶನ ನೀಡಿದರು. ತಂಡದ ಪರವಾಗಿ ಜುನೈದ್ ಸಿದ್ದೀಕಿ(5-35)ಐದು ವಿಕೆಟ್ ಕಬಳಿಸುವ ಮೂಲಕ ಟಿ-20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಯುಎಇ ತಂಡದ ಮೂರನೇ ಬೌಲರ್ ಎನಿಸಿಕೊಂಡರು. ಅಹ್ಮದ್ ರಝಾ(5-19)ಹಾಗೂ ಝುಬೈರ್ (5-21)ಈ ಸಾಧನೆ ಮಾಡಿದ್ದ ಇನ್ನಿಬ್ಬರು ಬೌಲರ್‌ಗಳಾಗಿದ್ದಾರೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

60 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

8 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

18 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

22 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

23 hours ago