ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ ವೆಸ್ಟ್ ಇಂಡೀಸ್ ತಂಡ ಟಿ-20 ವಿಶ್ವಕಪ್ ಪಂದ್ಯದಲ್ಲಿ ಗುರುವಾರ ಇಟಲಿ ತಂಡದ ವಿರದ್ಧ 42 ರನ್ಗಳ ಸುಲಭ ಗೆಲುವು ಸಾಧಿಸುವುದರೊಂದಿಗೆ ಲೀಗ್ನಲ್ಲಿ ಆಡಿದ ಎಲ್ಲ ಪಂದ್ಯಗಳಲ್ಲೂ ಜಯಗಳಿಸಿದ್ದು, ಸೂಪರ್ ಎಂಟರ ಹಂತಕ್ಕೆ ಸಜ್ಜಾಗಿದೆ.
ಹೋಪ್ 46 ಎಸೆತಗಳಲ್ಲಿ 75 ರನ್ ಹೊಡೆದು ವೆಸ್ಟ್ ಇಂಡೀಸ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಲು ನೆರವಾದರು.
ಉತ್ತರವಾಗಿ ಇಟಲಿ 18 ಓವರುಗಳಲ್ಲಿ 123 ರನ್ಗಳಿಗೆ ಆಲ್ ಔಟ್ ಆಯಿತು. ಹೋರಾಟ ಮುಗಿಸಿತು.
ಮಧ್ಯಮ ವೇಗಿಗಳಾದ ಮ್ಯಾಥ್ಯೂ ಫೋರ್ಡ್ (19ಕ್ಕೆ3), ಶಮರ್ ಜೋಸೆಫ್ (30ಕ್ಕೆ4) ಮತ್ತು ಎಡಗೈ ಸ್ಪಿನ್ನರ್ ಗುಡಕೇಶ್ ಮೋತಿ (24ಕ್ಕೆ2) ಅವರು ಎದುರಾಳಿ ತಂಡದ ಪತನಕ್ಕೆ ಕಾರಣರಾದರು. ಹೋಪ್ ಸರಾಗವಾಗಿ ಆಡಿ ಆರು ಬೌಂಡರಿ, ನಾಲ್ಕು ಸಿಕ್ಸರ್ ಬಾರಿಸಿದರು. ಇಟಲಿಯ ಅನುಭವಿ ಸ್ಪಿನ್ನರ್ಗಳಾದ ಬೆನ್ ಮನೆಂಟಿ (37ಕ್ಕೆ2) ಮತ್ತು ಕ್ರಿಶನ್ ಕಲುಗಮಗೆ (25ಕ್ಕೆ2) ಅವರು ವಿಂಡೀಸ್ ರನ್ವೇಗಕ್ಕೆ ಸ್ವಲ್ಪಮಟ್ಟಿಗೆ ಕಡಿವಾಣ ಹಾಕಿದರು. ಇಟಲಿ ಒಂದು ಗೆಲುವಿನೊಡನೆ (ನೇಪಾಳ ವಿರುದ್ಧ) ತನ್ನ ಅಭಿಯಾನ ಮುಗಿಸಿತು.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…