ಕ್ರೀಡೆ

ಟಿ-20 ಕ್ರಿಕೆಟ್ ವಿಶ್ವಕಪ್ ಸಮರ ಇಂದಿನಿಂದ

ಈ ಬಾರಿ ವಿಶ್ವಕಪ್‌ನಲ್ಲಿ ೧೬ ತಂಡಗಳು ಭಾಗಿ; ನ.೧೩ರಂದು ಫೈನಲ್ ಪಂದ್ಯಾವಳಿ

ಮೈಸೂರು: ಭರಪೂರ ಮನೋರಂಜನೆಯ ಆಗರ ಎಂದೇ ಖ್ಯಾತಿ ಗಳಿಸಿರುವ ಟಿ-೨೦ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಇಂದಿನಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗಲಿದೆ.
ನ.೧೩ರಂದು ನಡೆಯಲಿರುವ ಫೈನಲ್ ಪಂದ್ಯವನ್ನು ಸೇರಿಸಿಕೊಂಡು ಒಟ್ಟು ೪೫ ಪಂದ್ಯಗಳು ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡಲಿದೆ.
ಈ ಬಾರಿ ವಿಶ್ವಕಪ್‌ನಲ್ಲಿ ೧೬ ತಂಡಗಳು ಭಾಗವಹಿಸಲಿದ್ದು, ಅದರಲ್ಲಿ ೮ ತಂಡಗಳನ್ನು ತಲಾ ೪ ತಂಡಗಳಂತೆ ಎರಡು ಗ್ರೂಪ್‌ಗಳಾಗಿ ಮಾಡಲಾಗಿದೆ. ಈ ಎರಡು ಗ್ರೂಪ್‌ನಲ್ಲಿ ಮೊದಲ ಎರಡು ಸ್ಥಾನವನ್ನು ಗಳಿಸುವ ತಂಡಗಳು ಸೂಪರ್ ಸಿಕ್ಸ್ ಹಂತಕ್ಕೆ ಅರ್ಹತೆ ಪಡೆಯುತ್ತವೆ. ಸೂಪರ್ ಸಿಕ್ಸ್ ವಿಭಾಗದಲ್ಲೂ ಎರಡು ಗುಂಪುಗಳನ್ನು ಮಾಡಲಾ ಗಿದ್ದು, ಇಲ್ಲೂ ತಮ್ಮ ಗುಂಪಿನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿ ಫೈನಲ್ ಪ್ರವೇಶಿಸಲಿವೆ.
ಅರ್ಹತಾ ಸುತ್ತಿನ ಮೊದಲ ಪಂದ್ಯವು ಅ.೧೬ರಂದು ಶ್ರೀಲಂಕಾ ಹಾಗೂ ನಮಿಬಿಯಾ ನಡುವೆ ಪ್ರಾರಂಭವಾಗುವುದರೊಂದಿಗೆ ಟಿ-೨೦ ವಿಶ್ವಕಪ್ ಪಂದ್ಯಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಸೂಪರ್ ಸಿಕ್ಸ್ ಪಂದ್ಯಗಳು ಅ.೨೨ರಂದು ಪ್ರಾರಂಭವಾಗಲಿದ್ದೂ, ಕಳೆದ ಪಂದ್ಯಾವಳಿಯಲ್ಲಿ ಟ್ರೋಫಿಯನ್ನು ಗೆದ್ದ ಆಸ್ಟ್ರೇಲಿಯಾ ಹಾಗೂ ರನ್ನರ್ ಅಪ್ ಆಗಿದ್ದ ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆಯುತ್ತದೆ. ಭಾರತ ತಂಡವು ಸೂಪರ್ ಸಿಕ್ಸ್‌ನ ೨ನೇ ಗ್ರೂಪಿನಲ್ಲಿ ಇದೆ. ಇದೇ ಗುಂಪಿನಲ್ಲಿರುವ ಪಾಕಿಸ್ತಾನದ ಜತೆ ಅ.೨೩ರಂದು ಪಂದ್ಯ ಆಡುವ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
—————-

ಪ್ರಮುಖ ದಿನಗಳು
* ಅ.೧೬ರಂದು ಟೂರ್ನಿ ಶುರು
* ಅ.೨೨ರಂದು ಸೂಪರ್ ಸಿಕ್ಸ್ ಪ್ರಾರಂಭ
* ನ.೯ರಂದು ಮೊದಲ ಸೆಮಿ ಫೈನಲ್
* ನ.೧೦ರಂದು ಎರಡನೇ ಸೆಮಿ ಫೈನಲ್
* ನ.೧೩ರಂದು ಅಂತಿಮ ಪಂದ್ಯಾವಳಿ
———-
ಭಾರತ ತಂಡದ ಪಂದ್ಯಗಳು
ಅ.೨೩- ಪಾಕಿಸ್ತಾನ
ಅ.೨೭ -ಎ೨
ಅ.೩೦- ದಕ್ಷಿಣ ಆಫ್ರಿಕಾ
ನ.೨- ಬಾಂಗ್ಲಾದೇಶ
ನ.೬- ಬಿ೧
———
ಭಾರತದ ತಂಡ
ರೋಹಿತ್ ಶರ್ಮಾ(ನಾಯಕ), ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಶದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿಬಿಷ್ಣೋಯಿ, ದೀಪಕ್ ಚಹರ್.
—————
ಸೂಪರ್ ಸಿಕ್ಸ್ ವಿಭಾಗ
ಗ್ರೂಪ್-೧ : ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಆಫ್ಘಾನಿಸ್ತಾನ, ಇಂಗ್ಲೆಂಡ್, ಎ೧, ಬಿ೨
ಗ್ರೂಪ್-೨: ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಎ೨, ಬಿ೧
———–
ಅರ್ಹತಾ ಸುತ್ತು ವಿಭಾಗ
ಗ್ರೂಪ್-ಎ: ಶ್ರೀಲಂಕಾ, ನಮಿಬಿಯಾ, ಯುಎಇ, ನೆದರ್ ಲ್ಯಾಂಡ್.
ಗ್ರೂಪ್-ಬಿ: ವೆಸ್ಟ್ ಇಂಡೀಸ್, ಸ್ಕಾಟ್ಲೆಂಡ್, ಜಿಂಬ್ಬಾವ್ವೆ, ಐರ್ಲೆಂಡ್


ವಿಶ್ವಕಪ್ ಗೆದ್ದ ತಂಡಗಳು
೨೦೦೭: ಭಾರತ
೨೦೦೯: ಪಾಕಿಸ್ತಾನ
೨೦೧೦: ಇಂಗ್ಲೆಂಡ್
೨೦೧೨: ವೆಸ್ಟ್ ಇಂಡೀಸ್
೨೦೧೪: ಶ್ರೀಲಂಕಾ
೨೦೧೬: ವೆಸ್ಟ್ ಇಂಡೀಸ್
೨೦೨೧: ಆಸ್ಟ್ರೇಲಿಯಾ

andolanait

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

5 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

10 hours ago