ಕ್ರೀಡೆ

T20 WorldCup 2024: ಇಂಗ್ಲೆಂಡ್‌ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಗಯಾನಾ: ಇಲ್ಲಿನ ಪ್ರಾವಿಡೆನ್ಸ್‌ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಇಂಗ್ಲೆಂಡ್‌ ವಿರುದ್ಧ 68 ರನ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಫೈನಲ್‌ಗೆ ಪ್ರವೇಶಿಸಿದೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್‌ ಶರ್ಮಾ ಅರ್ಧಶತಕ, ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಪಾಂಡ್ಯ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಕಲೆಹಕಿ ಎದುರಾಳಿ ಇಂಗ್ಲೆಂಡ್‌ಗೆ 172 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್‌ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಆಲ್‌ಔಟ್‌ ಆಗಿದೆ.

ಭಾರತದ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಕಣಕ್ಕಿಳಿದರು. ವಿರಾಟ್‌ ಕೊಹ್ಲಿ 9 ರನ್‌ಗಳಿಗೆ ಔಟ್‌ ಆದರೆ, ರೋಹಿತ್‌ ಶರ್ಮಾ 57 (39) ರನ್‌ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ರಿಷಬ್‌ ಪಂತ್‌ 4 ರನ್‌ ಕಲೆಹಾಕಿದರೆ, ಸೂರ್ಯಕುಮಾರ್‌ ಯಾದವ್‌ 47 (36) ರನ್‌ ಗಳಿಸಿ ಉತ್ತಮ ಪ್ರದರ್ಶನ ನೀಡಿದರು. ಹಾರ್ದಿಕ್‌ ಪಾಂಡ್ಯ 23 (13) ರನ್‌, ರವೀಂದ್ರ ಜಡೇಜಾ ಅಜೇಯ 17, ಶಿವಮ್‌ ದುಬೆ ಡಕ್‌ಔಟ್‌, ಅಕ್ಷರ್‌ ಪಟೇಲ್‌ 10 ಮತ್ತು ಅರ್ಷ್‌ದೀಪ್‌ ಸಿಂಗ್‌ ಅಜೇಯ 1 ರನ್‌ ಗಳಿಸಿದರು.

ಇಂಗ್ಲೆಂಡ್‌ ಪರ ಕ್ರಿಸ್‌ ಜೋರ್ಡನ್‌ 3 ವಿಕೆಟ್, ಆದಿಲ್‌ ರಶೀದ್‌, ಸ್ಯಾಮ್‌ ಕರನ್‌, ಜೋಫ್ರಾ ಆರ್ಚರ್‌ ಮತ್ತು ರೀಸ್‌ ಟಾಪ್ಲಿ ತಲಾ ಒಂದೊಂದು ವಿಕೆಟ್‌ ಪಡೆದರು.

ಇಂಗ್ಲೆಂಡ್‌ ಇನ್ನಿಂಗ್ಸ್:‌ ಭಾರತ ನೀಡಿದ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್‌ ಪರ ಆರಂಭಿಕರಾಗಿ ಕಣಕ್ಕಿಳಿದ ಫಿಲಿಫ್‌ ಸಾಲ್ಟ್‌ 5 ರನ್‌ ಹಾಗೂ ಜೋಸ್‌ ಬಟ್ಲರ್‌ 23 ರನ್‌ ಗಳಿಸಿದರು. ಇನ್ನುಳಿದಂತೆ ಮೊಯಿನ್‌ ಅಲಿ 8, ಜಾನಿ ಬೈರ್‌ಸ್ಟೋ ಡಕ್‌ಔಟ್‌, ಹ್ಯಾರಿ ಬ್ರೂಕ್‌ 25, ಸ್ಯಾಮ್‌ ಕರನ್‌ 2, ಲಿಯಾಮ್‌ ಲಿವಿಂಗ್‌ಸ್ಟನ್‌ 11, ಕ್ರಿಸ್‌ ಜೋರ್ಡನ್‌ 1, ಜೋಫ್ರಾ ಆರ್ಚರ್‌ 21, ಆದಿಲ್‌ ರಶೀದ್‌ 2 ಮತ್ತು ರೀಸ್‌ ಟಾಪ್ಲಿ ಅಜೇಯ 3 ರನ್‌ ಗಳಿಸಿದರು.

ಭಾರತದ ಪರ ಅಕ್ಷರ್‌ ಪಟೇಲ್ ಹಾಗೂ ಕುಲ್‌ದೀಪ್‌ ಯಾದವ್‌ ತಲಾ 3 ವಿಕೆಟ್‌ ಪಡೆದರೆ, ಜಸ್‌ಪ್ರೀತ್‌ ಬುಮ್ರಾ 2 ವಿಕೆಟ್‌ ಪಡೆದರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

1 hour ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

2 hours ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

2 hours ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

14 hours ago