ಬಾರ್ಬಡೋಸ್ನಲ್ಲಿ ಇಂದು ( ಜೂನ್ 29 ) ನಡೆಯಲಿರುವ ಈ ಬಾರಿಯ ಟಿಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದ್ದು, ಯಾವ ತಂಡ ಗೆದ್ದು ಫೈನಲ್ ಆಗಲಿದೆ ಎಂಬ ಕುತೂಹಲ ಮೂಡಿದೆ.
ಚೊಚ್ಚಲ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ಎರಡನೇ ಬಾರಿಗೆ ಚಾಂಪಿಯನ್ ಆಗುವತ್ತ ಚಿತ್ತ ನೆಟ್ಟಿದ್ದು, ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾ ಮೊದಲ ವಿಶ್ವಕಪ್ ಕನಸು ಕಾಣುತ್ತಿದೆ.
ಇನ್ನು ಎರಡೂ ತಂಡಗಳು ಟಿ ಟ್ವೆಂಟಿ ವಿಶ್ವಕಪ್ನಲ್ಲಿ ಇಲ್ಲಿಯವರೆಗೂ ಎಷ್ಟು ಬಾರಿ ಮುಖಾಮುಖಿಯಾಗಿವೆ ಹಾಗೂ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠವೆನಿಸಿಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ವಿಶ್ವಕಪ್ ಮುಖಾಮುಖಿ
ಒಟ್ಟು ಪಂದ್ಯಗಳು: 6
ಭಾರತ ಗೆಲುವು: 4
ದಕ್ಷಿಣ ಆಫ್ರಿಕಾ ಗೆಲುವು: 2
ಭಾರತ vs ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಮುಖಾಮುಖಿಯ ಎಲ್ಲಾ ಪಂದ್ಯಗಳ ಫಲಿತಾಂಶ
2007 - ಗ್ರೂಪ್ ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 37 ರನ್ಗಳ ಗೆಲುವು
2009 – ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 12 ರನ್ಗಳ ಗೆಲುವು
2010 – ಗ್ರೂಪ್ ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 14 ರನ್ಗಳ ಗೆಲುವು
2012 – ಸೂಪರ್ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 1 ರನ್ ಜಯ
2014 – ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್ಗಳ ಜಯ
2022 – ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 5 ವಿಕೆಟ್ಗಳ ಜಯ
ಒಟ್ಟಾರೆ ಟಿ20 ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ಆಡಿದ ಒಟ್ಟು ಪಂದ್ಯಗಳು: 26
ಭಾರತ ಗೆಲುವು: 14
ದಕ್ಷಿಣ ಆಫ್ರಿಕಾ ಗೆಲುವು: 11
ಫಲಿತಾಂಶ ಸಿಗದ ಪಂದ್ಯ: 1
ಸೋಲಿಲ್ಲದ ಸರದಾರರ ಕಾಳಗ: ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಇತ್ತಂಡಗಳು ತಮ್ಮ ಯಾವುದೇ ಪಂದ್ಯದಲ್ಲಿಯೂ ಸೋತಿಲ್ಲ. ಗ್ರೂಪ್, ಸೂಪರ್ 8 ಮತ್ತು ಸೆಮಿಫೈನಲ್ ಹಂತಗಳು ಸೇರಿದಂತೆ ಒಟ್ಟು 8 ಪಂದ್ಯಗಳಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಣಕ್ಕಿಳಿದಿದ್ದು, ಹರಿಣಗಳು ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಿದ್ದರೆ, ಭಾರತ 7 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಟೀಮ್ ಇಂಡಿಯಾದ ಗ್ರೂಪ್ ಹಂತದ ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…