ಕ್ರೀಡೆ

T20 Worldcup 2024: ಭಾರತ vs ದ. ಆಫ್ರಿಕಾ ನಡುವೆ ನಡೆದ ಎಲ್ಲಾ ಟಿ20 ವಿಶ್ವಕಪ್‌ ಪಂದ್ಯಗಳ ಫಲಿತಾಂಶ

ಬಾರ್ಬಡೋಸ್‌ನಲ್ಲಿ ಇಂದು ( ಜೂನ್‌ 29 ) ನಡೆಯಲಿರುವ ಈ ಬಾರಿಯ ಟಿಟ್ವೆಂಟಿ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದ್ದು, ಯಾವ ತಂಡ ಗೆದ್ದು ಫೈನಲ್‌ ಆಗಲಿದೆ ಎಂಬ ಕುತೂಹಲ ಮೂಡಿದೆ.

ಚೊಚ್ಚಲ ಟಿ 20 ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದ ಭಾರತ ಎರಡನೇ ಬಾರಿಗೆ ಚಾಂಪಿಯನ್‌ ಆಗುವತ್ತ ಚಿತ್ತ ನೆಟ್ಟಿದ್ದು, ಇದೇ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾ ಮೊದಲ ವಿಶ್ವಕಪ್‌ ಕನಸು ಕಾಣುತ್ತಿದೆ.

ಇನ್ನು ಎರಡೂ ತಂಡಗಳು ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಇಲ್ಲಿಯವರೆಗೂ ಎಷ್ಟು ಬಾರಿ ಮುಖಾಮುಖಿಯಾಗಿವೆ ಹಾಗೂ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠವೆನಿಸಿಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ವಿಶ್ವಕಪ್ ಮುಖಾಮುಖಿ ‌
ಒಟ್ಟು ಪಂದ್ಯಗಳು: 6
ಭಾರತ ಗೆಲುವು: 4
ದಕ್ಷಿಣ ಆಫ್ರಿಕಾ ಗೆಲುವು: 2

ಭಾರತ vs ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್‌ ಮುಖಾಮುಖಿಯ ಎಲ್ಲಾ ಪಂದ್ಯಗಳ ಫಲಿತಾಂಶ

2007 -‌ ಗ್ರೂಪ್ ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 37 ರನ್‌ಗಳ ಗೆಲುವು
2009 – ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 12 ರನ್‌ಗಳ ಗೆಲುವು
2010 – ಗ್ರೂಪ್ ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 14 ರನ್‌ಗಳ ಗೆಲುವು
2012 – ಸೂಪರ್‌ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 1 ರನ್‌ ಜಯ
2014 – ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ
2022 – ಗ್ರೂಪ್‌ ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 5 ವಿಕೆಟ್‌ಗಳ ಜಯ

ಒಟ್ಟಾರೆ ಟಿ20 ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ಆಡಿದ ಒಟ್ಟು ಪಂದ್ಯಗಳು: 26
ಭಾರತ ಗೆಲುವು: 14
ದಕ್ಷಿಣ ಆಫ್ರಿಕಾ ಗೆಲುವು: 11
ಫಲಿತಾಂಶ ಸಿಗದ ಪಂದ್ಯ: 1

ಸೋಲಿಲ್ಲದ ಸರದಾರರ ಕಾಳಗ: ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಇತ್ತಂಡಗಳು ತಮ್ಮ ಯಾವುದೇ ಪಂದ್ಯದಲ್ಲಿಯೂ ಸೋತಿಲ್ಲ. ಗ್ರೂಪ್‌, ಸೂಪರ್‌ 8 ಮತ್ತು ಸೆಮಿಫೈನಲ್‌ ಹಂತಗಳು ಸೇರಿದಂತೆ ಒಟ್ಟು 8 ಪಂದ್ಯಗಳಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಣಕ್ಕಿಳಿದಿದ್ದು, ಹರಿಣಗಳು ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಿದ್ದರೆ, ಭಾರತ 7 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಟೀಮ್‌ ಇಂಡಿಯಾದ ಗ್ರೂಪ್‌ ಹಂತದ ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

11 mins ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

36 mins ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

2 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

3 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

3 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

5 hours ago