ಕ್ರೀಡೆ

T20 Worldcup 2024: ಭಾರತ vs ದ. ಆಫ್ರಿಕಾ ನಡುವೆ ನಡೆದ ಎಲ್ಲಾ ಟಿ20 ವಿಶ್ವಕಪ್‌ ಪಂದ್ಯಗಳ ಫಲಿತಾಂಶ

ಬಾರ್ಬಡೋಸ್‌ನಲ್ಲಿ ಇಂದು ( ಜೂನ್‌ 29 ) ನಡೆಯಲಿರುವ ಈ ಬಾರಿಯ ಟಿಟ್ವೆಂಟಿ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದ್ದು, ಯಾವ ತಂಡ ಗೆದ್ದು ಫೈನಲ್‌ ಆಗಲಿದೆ ಎಂಬ ಕುತೂಹಲ ಮೂಡಿದೆ.

ಚೊಚ್ಚಲ ಟಿ 20 ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದ ಭಾರತ ಎರಡನೇ ಬಾರಿಗೆ ಚಾಂಪಿಯನ್‌ ಆಗುವತ್ತ ಚಿತ್ತ ನೆಟ್ಟಿದ್ದು, ಇದೇ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾ ಮೊದಲ ವಿಶ್ವಕಪ್‌ ಕನಸು ಕಾಣುತ್ತಿದೆ.

ಇನ್ನು ಎರಡೂ ತಂಡಗಳು ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ಇಲ್ಲಿಯವರೆಗೂ ಎಷ್ಟು ಬಾರಿ ಮುಖಾಮುಖಿಯಾಗಿವೆ ಹಾಗೂ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠವೆನಿಸಿಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ವಿಶ್ವಕಪ್ ಮುಖಾಮುಖಿ ‌
ಒಟ್ಟು ಪಂದ್ಯಗಳು: 6
ಭಾರತ ಗೆಲುವು: 4
ದಕ್ಷಿಣ ಆಫ್ರಿಕಾ ಗೆಲುವು: 2

ಭಾರತ vs ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್‌ ಮುಖಾಮುಖಿಯ ಎಲ್ಲಾ ಪಂದ್ಯಗಳ ಫಲಿತಾಂಶ

2007 -‌ ಗ್ರೂಪ್ ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 37 ರನ್‌ಗಳ ಗೆಲುವು
2009 – ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 12 ರನ್‌ಗಳ ಗೆಲುವು
2010 – ಗ್ರೂಪ್ ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 14 ರನ್‌ಗಳ ಗೆಲುವು
2012 – ಸೂಪರ್‌ 8 ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 1 ರನ್‌ ಜಯ
2014 – ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ
2022 – ಗ್ರೂಪ್‌ ಹಂತದ ಪಂದ್ಯದಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ 5 ವಿಕೆಟ್‌ಗಳ ಜಯ

ಒಟ್ಟಾರೆ ಟಿ20 ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ಆಡಿದ ಒಟ್ಟು ಪಂದ್ಯಗಳು: 26
ಭಾರತ ಗೆಲುವು: 14
ದಕ್ಷಿಣ ಆಫ್ರಿಕಾ ಗೆಲುವು: 11
ಫಲಿತಾಂಶ ಸಿಗದ ಪಂದ್ಯ: 1

ಸೋಲಿಲ್ಲದ ಸರದಾರರ ಕಾಳಗ: ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಇತ್ತಂಡಗಳು ತಮ್ಮ ಯಾವುದೇ ಪಂದ್ಯದಲ್ಲಿಯೂ ಸೋತಿಲ್ಲ. ಗ್ರೂಪ್‌, ಸೂಪರ್‌ 8 ಮತ್ತು ಸೆಮಿಫೈನಲ್‌ ಹಂತಗಳು ಸೇರಿದಂತೆ ಒಟ್ಟು 8 ಪಂದ್ಯಗಳಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಣಕ್ಕಿಳಿದಿದ್ದು, ಹರಿಣಗಳು ಎಲ್ಲಾ ಪಂದ್ಯಗಳಲ್ಲೂ ಗೆಲುವು ಸಾಧಿಸಿದ್ದರೆ, ಭಾರತ 7 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಟೀಮ್‌ ಇಂಡಿಯಾದ ಗ್ರೂಪ್‌ ಹಂತದ ಒಂದು ಪಂದ್ಯ ಮಳೆಯಿಂದ ರದ್ದಾಗಿತ್ತು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

19 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

20 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

22 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

24 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

29 mins ago