ಕ್ರೀಡೆ

t20 worldcup 2024: ಪಾಕ್‌ ಬಗ್ಗುಬಡಿದು ಪಾಕಿಸ್ತಾನ ದಾಖಲಿಸಿದ್ದ ರೆಕಾರ್ಡನ್ನೆ ಮುರಿದ ಟೀಂ ಇಂಡಿಯಾ

ನ್ಯೂಯಾರ್ಕ್:‌ ಟೀಂ ಇಂಡಿಯಾದ ಸಂಘಟಿತಾ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ತುತ್ತಾದ ಪಾಕಿಸ್ತಾನ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿದೆ. ಆ ಮೂಲಕ ಪಾಕಿಸ್ತಾನ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಸತತ ಎರಡನೇ ಪಂದ್ಯ ಸೋಲುವ ಮೂಲಕ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ ಆಗಿದೆ.

ಇಲ್ಲಿನ ನಸ್ಸೌ ಕೌಂಟಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌ ಹಂತದ 19ನೇ ಪಂದ್ಯದಲ್ಲಿ ಭಾರತ 19 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 119 ರನ್‌ ಗಳಿಸಿ ಪಾಕ್‌ಗೆ 120 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 113 ರನ್‌ ಕಲೆಹಾಕುವ ಮೂಲಕ 6 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಇನ್ನು ಈ ಟಿ20 ವಿಶ್ವಕಪ್‌ನಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಪಾಕಿಸ್ತಾನ ನಿರ್ಮಿಸಿದ್ದ ತನ್ನದೇ ವಿಶ್ವ ದಾಖಲೆಯನ್ನು ಭಾರತ ಸರಿಗಟ್ಟಿತು.

ಬದ್ಧ ವೈರಿಗಳ ಕಾದಾಟಗಳಲ್ಲಿ ಅತೀ ಕಡಿಮೆ ಮೊತ್ತವನ್ನು (120) ಟಿ20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾ ಡಿಫೆಂಡ್‌ ಮಾಡುವ ಮೂಲಕ ನೂತನ ವಿಶ್ವ ದಾಖಲೆಯನ್ನು ಬರೆದಿದೆ.

ಅಂದರೆ ಟಿ20 ವಿಶ್ವಕಪ್‌ ನಲ್ಲಿ ತಂಡವೊಂದರ ಮೇಲೆ ಅತಿಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆ ಭಾರತ ಪಾತ್ರವಾಗಿದೆ. ಈ ಹಿಂದೆ ಈ ದಾಖಲೆ ಪಾಕಿಸ್ತಾನದ ಹೆಸರಿನಲ್ಲಿತ್ತು. ಪಾಕಿಸ್ತಾನ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 6 ಗೆಲುವನ್ನು ದಾಖಲಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿತ್ತು. ಇದೀಗ ಪಾಕಿಸ್ತಾನ ವಿರುದ್ಧ 7 ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್‌ ರಚಿಸಿದ್ದ ದಾಖಲೆಯನ್ನು ಭಾರತ ಪುಡಿಗಟ್ಟುವ ಮೂಲಕ ನೂತನ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

57 mins ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

1 hour ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

1 hour ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

9 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

13 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago