ಕ್ರೀಡೆ

T20 worldcup: ಟಿ20 ವಿಶ್ವಕಪ್‌ ಟೂರ್ನಿಗಾಗಿ ಅಮೇರಿಕಾಕ್ಕೆ ಹಾರಿದ ಡಿಕೆ: ಪ್ಲೇಯರ್‌ ಆಗಿ ಅಲ್ಲ!

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ‌ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್‌ ನೀಡಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್‌ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ ಅಧಿಕೃತ ಖಾತೆಯಲ್ಲಿಂದು ಬಿಡುಗಡೆ ಮಾಡಿದೆ.

ಒಟ್ಟು 40 ಅನುಭಿವಗಳು ಕಾಮೆಂಟರಿ ಪ್ಯಾನಲ್‌ ಹಂಚಿಕೊಳ್ಳಲಿದ್ದಾರೆ. ಇದರಲ್ಲಿ ಟೀಂ ಇಂಡಿಯಾದ ನಾಲ್ವರು ಮಾಜಿ ಆಟಗಾರರು ಸ್ಥಾನ ಪಡೆದಿರುವುದು ವಿಶೇಷ. ಅದರಲ್ಲೂ ಈಗಷ್ಟೇ ಟಿ20 ಕ್ರಿಕೆಟ್‌ ಹಾಗೂ ಐಪಿಎಲ್‌ನಿಂದ ವಿದಾಯ ಹೇಳಿರುವ ಡಿಕೆ ಅಲಿಯಾಸ್‌ ದಿನೇಶ್‌ ಕಾರ್ತಿಕ್‌ ಅವರು ಸಹಾ ಈ ಪ್ಯಾನಲ್‌ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

https://x.com/ICC/status/1793945360215232697

ಹೌದು ಈಗಷ್ಟೇ ಆರ್‌ಸಿಬಿ ಪರ ಉತ್ತಮ ಪ್ರದರ್ಶನ ನೀಡಿ, ಆರ್‌ಸಿಬಿ ಜತೆಗೆ ತಮ್ಮ ಅಭಿಯಾನವನ್ನು ಮುಗಿಸಿ ದಿನೇಶ್‌ ಕಾರ್ತಿಕ್‌ ಅವರನ್ನು ಮತ್ತೆ ಕಾಮೆಂಟರಿ ಪ್ಯಾನೆಲ್‌ಗೆ ಆಯ್ಕೆ ಮಾಡಲಾಗಿದೆ. ಇವರನ್ನು ಸೇರಿದಂತೆ ಒಟ್ಟು ನಾಲ್ವರು ಭಾರತೀಯರನ್ನು ಈ ಬಾರಿ ವೀಕ್ಷಕ ವಿವರಣೆಗಾಗಿ ನೇಮಿಸಿದ್ದು, ಮಾಜಿ ಟೀಂ ಇಂಡಿಯಾ ಕೋಚ್‌ ರವಿ ಶಾಸ್ರ್ತಿ, ಸುನೀಲ್‌ ಗವಾಸ್ಕರ್‌, ಹರ್ಷಾ ಭೋಗ್ಲೆ ಮತ್ತು ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನ ಲಭಿಸಿದೆ. ಆದರೆ ಟೀಂ ಇಂಡಿಯಾದ ಬ್ಯಾಟರ್‌ ವಿರೇಂದ್ರ ಸೆಹ್ವಾಗ್‌ ಗೆ ಇಲ್ಲಿ ಸ್ಥಾನ ನೀಡಲಾಗಿಲ್ಲ.

ಉಳಿದಂತೆ ರಿಕ್ಕಿ ಪಾಂಟಿಂಗ್‌, ಇಯಾನ್‌ ಬಿಷಪ್‌, ನಾಸಿರ್‌ ಹುಸೇನ್‌, ಗ್ರೇಮ್‌ ಸ್ಮಿತ್‌, ಸ್ಟೀವ್‌ ಸ್ಮಿತ್‌ ಅಮೇರಿಕನ್‌ ಕಾಮೆಂಟೇಟರ್‌ ಜೇಮ್ಸ್‌ ಓʼಬ್ರೇನ್‌, ವರ್ಲ್ಡ್‌ಕಪ್‌ ವಿನ್ನರ್‌ ಇಯಾನ್‌ ಮಾರ್ಗನ್‌, ವಾಸಿ ಅಕ್ರಂ ಸೇರಿದಂತೆ ಹಲವು ಲೆಜೆಂಟ್‌ ಕ್ರಿಕೆಟರ್ಸ್‌ ಈ ಟೂರ್ನಿಯಲ್ಲಿ ಕಾಮೆಂಟೇಟರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೈಕಮಾಂಡ್‌ ನನ್ನ ಪರವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಎರಡುವರೆ ವರ್ಷಗಳಿಗೆ ಮಾತ್ರ ಮುಖ್ಯಮಂತ್ರಿ ಹುದ್ದೆ ಎಂದು ತೀರ್ಮಾನವಾಗಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು ತೀರ್ಮಾನ ಮಾಡಿದರೆ ಮುಂದೆಯೂ…

21 mins ago

ಹೆಮ್ಮಿಗೆಯಲ್ಲಿ ಹುಲಿ ದಾಳಿಗೆ ಹಸು ಬಲಿ: ರೈತರಲ್ಲಿ ಆತಂಕ

ಹುಣಸೂರು : ತಾಲೂಕಿನ ಹನಗೋಡು ಹೋಬಳಿಯ ಹೆಮ್ಮಿಗೆ ಬಳಿಯ ಜಮೀನಿನಲ್ಲಿ ಹಗಲು ವೇಳೆಯೇ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು…

1 hour ago

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…

3 hours ago

ನನಗೂ ಎಂಎಲ್‌ಸಿ ಸ್ಥಾನ ಕೊಡಿ : ರಕ್ತದಲ್ಲಿ ಸಹಿ ಹಾಕಿ ವರಿಷ್ಠರಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…

3 hours ago

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

6 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

6 hours ago