ಕ್ರೀಡೆ

T20 worldcup: ಟಿ20 ವಿಶ್ವಕಪ್‌ ಟೂರ್ನಿಗಾಗಿ ಅಮೇರಿಕಾಕ್ಕೆ ಹಾರಿದ ಡಿಕೆ: ಪ್ಲೇಯರ್‌ ಆಗಿ ಅಲ್ಲ!

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ‌ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್‌ ನೀಡಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್‌ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ ಅಧಿಕೃತ ಖಾತೆಯಲ್ಲಿಂದು ಬಿಡುಗಡೆ ಮಾಡಿದೆ.

ಒಟ್ಟು 40 ಅನುಭಿವಗಳು ಕಾಮೆಂಟರಿ ಪ್ಯಾನಲ್‌ ಹಂಚಿಕೊಳ್ಳಲಿದ್ದಾರೆ. ಇದರಲ್ಲಿ ಟೀಂ ಇಂಡಿಯಾದ ನಾಲ್ವರು ಮಾಜಿ ಆಟಗಾರರು ಸ್ಥಾನ ಪಡೆದಿರುವುದು ವಿಶೇಷ. ಅದರಲ್ಲೂ ಈಗಷ್ಟೇ ಟಿ20 ಕ್ರಿಕೆಟ್‌ ಹಾಗೂ ಐಪಿಎಲ್‌ನಿಂದ ವಿದಾಯ ಹೇಳಿರುವ ಡಿಕೆ ಅಲಿಯಾಸ್‌ ದಿನೇಶ್‌ ಕಾರ್ತಿಕ್‌ ಅವರು ಸಹಾ ಈ ಪ್ಯಾನಲ್‌ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

https://x.com/ICC/status/1793945360215232697

ಹೌದು ಈಗಷ್ಟೇ ಆರ್‌ಸಿಬಿ ಪರ ಉತ್ತಮ ಪ್ರದರ್ಶನ ನೀಡಿ, ಆರ್‌ಸಿಬಿ ಜತೆಗೆ ತಮ್ಮ ಅಭಿಯಾನವನ್ನು ಮುಗಿಸಿ ದಿನೇಶ್‌ ಕಾರ್ತಿಕ್‌ ಅವರನ್ನು ಮತ್ತೆ ಕಾಮೆಂಟರಿ ಪ್ಯಾನೆಲ್‌ಗೆ ಆಯ್ಕೆ ಮಾಡಲಾಗಿದೆ. ಇವರನ್ನು ಸೇರಿದಂತೆ ಒಟ್ಟು ನಾಲ್ವರು ಭಾರತೀಯರನ್ನು ಈ ಬಾರಿ ವೀಕ್ಷಕ ವಿವರಣೆಗಾಗಿ ನೇಮಿಸಿದ್ದು, ಮಾಜಿ ಟೀಂ ಇಂಡಿಯಾ ಕೋಚ್‌ ರವಿ ಶಾಸ್ರ್ತಿ, ಸುನೀಲ್‌ ಗವಾಸ್ಕರ್‌, ಹರ್ಷಾ ಭೋಗ್ಲೆ ಮತ್ತು ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನ ಲಭಿಸಿದೆ. ಆದರೆ ಟೀಂ ಇಂಡಿಯಾದ ಬ್ಯಾಟರ್‌ ವಿರೇಂದ್ರ ಸೆಹ್ವಾಗ್‌ ಗೆ ಇಲ್ಲಿ ಸ್ಥಾನ ನೀಡಲಾಗಿಲ್ಲ.

ಉಳಿದಂತೆ ರಿಕ್ಕಿ ಪಾಂಟಿಂಗ್‌, ಇಯಾನ್‌ ಬಿಷಪ್‌, ನಾಸಿರ್‌ ಹುಸೇನ್‌, ಗ್ರೇಮ್‌ ಸ್ಮಿತ್‌, ಸ್ಟೀವ್‌ ಸ್ಮಿತ್‌ ಅಮೇರಿಕನ್‌ ಕಾಮೆಂಟೇಟರ್‌ ಜೇಮ್ಸ್‌ ಓʼಬ್ರೇನ್‌, ವರ್ಲ್ಡ್‌ಕಪ್‌ ವಿನ್ನರ್‌ ಇಯಾನ್‌ ಮಾರ್ಗನ್‌, ವಾಸಿ ಅಕ್ರಂ ಸೇರಿದಂತೆ ಹಲವು ಲೆಜೆಂಟ್‌ ಕ್ರಿಕೆಟರ್ಸ್‌ ಈ ಟೂರ್ನಿಯಲ್ಲಿ ಕಾಮೆಂಟೇಟರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

56 mins ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

2 hours ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

3 hours ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

3 hours ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

3 hours ago