ನವದೆಹಲಿ: ಮುಂಬರುವ ಟಿ20 ವಿಶ್ವಕಪ್ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ (ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್) ಈಗ ಮತ್ತೊಂದು ಅಪ್ಡೇಟ್ ನೀಡಿದೆ.
ಈ ಬಾರಿಯ ವಿಶ್ವಕಪ್ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ ಅಧಿಕೃತ ಖಾತೆಯಲ್ಲಿಂದು ಬಿಡುಗಡೆ ಮಾಡಿದೆ.
ಒಟ್ಟು 40 ಅನುಭಿವಗಳು ಕಾಮೆಂಟರಿ ಪ್ಯಾನಲ್ ಹಂಚಿಕೊಳ್ಳಲಿದ್ದಾರೆ. ಇದರಲ್ಲಿ ಟೀಂ ಇಂಡಿಯಾದ ನಾಲ್ವರು ಮಾಜಿ ಆಟಗಾರರು ಸ್ಥಾನ ಪಡೆದಿರುವುದು ವಿಶೇಷ. ಅದರಲ್ಲೂ ಈಗಷ್ಟೇ ಟಿ20 ಕ್ರಿಕೆಟ್ ಹಾಗೂ ಐಪಿಎಲ್ನಿಂದ ವಿದಾಯ ಹೇಳಿರುವ ಡಿಕೆ ಅಲಿಯಾಸ್ ದಿನೇಶ್ ಕಾರ್ತಿಕ್ ಅವರು ಸಹಾ ಈ ಪ್ಯಾನಲ್ ಬಾಕ್ಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
https://x.com/ICC/status/1793945360215232697
ಹೌದು ಈಗಷ್ಟೇ ಆರ್ಸಿಬಿ ಪರ ಉತ್ತಮ ಪ್ರದರ್ಶನ ನೀಡಿ, ಆರ್ಸಿಬಿ ಜತೆಗೆ ತಮ್ಮ ಅಭಿಯಾನವನ್ನು ಮುಗಿಸಿ ದಿನೇಶ್ ಕಾರ್ತಿಕ್ ಅವರನ್ನು ಮತ್ತೆ ಕಾಮೆಂಟರಿ ಪ್ಯಾನೆಲ್ಗೆ ಆಯ್ಕೆ ಮಾಡಲಾಗಿದೆ. ಇವರನ್ನು ಸೇರಿದಂತೆ ಒಟ್ಟು ನಾಲ್ವರು ಭಾರತೀಯರನ್ನು ಈ ಬಾರಿ ವೀಕ್ಷಕ ವಿವರಣೆಗಾಗಿ ನೇಮಿಸಿದ್ದು, ಮಾಜಿ ಟೀಂ ಇಂಡಿಯಾ ಕೋಚ್ ರವಿ ಶಾಸ್ರ್ತಿ, ಸುನೀಲ್ ಗವಾಸ್ಕರ್, ಹರ್ಷಾ ಭೋಗ್ಲೆ ಮತ್ತು ದಿನೇಶ್ ಕಾರ್ತಿಕ್ ಅವರಿಗೆ ಸ್ಥಾನ ಲಭಿಸಿದೆ. ಆದರೆ ಟೀಂ ಇಂಡಿಯಾದ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಗೆ ಇಲ್ಲಿ ಸ್ಥಾನ ನೀಡಲಾಗಿಲ್ಲ.
ಉಳಿದಂತೆ ರಿಕ್ಕಿ ಪಾಂಟಿಂಗ್, ಇಯಾನ್ ಬಿಷಪ್, ನಾಸಿರ್ ಹುಸೇನ್, ಗ್ರೇಮ್ ಸ್ಮಿತ್, ಸ್ಟೀವ್ ಸ್ಮಿತ್ ಅಮೇರಿಕನ್ ಕಾಮೆಂಟೇಟರ್ ಜೇಮ್ಸ್ ಓʼಬ್ರೇನ್, ವರ್ಲ್ಡ್ಕಪ್ ವಿನ್ನರ್ ಇಯಾನ್ ಮಾರ್ಗನ್, ವಾಸಿ ಅಕ್ರಂ ಸೇರಿದಂತೆ ಹಲವು ಲೆಜೆಂಟ್ ಕ್ರಿಕೆಟರ್ಸ್ ಈ ಟೂರ್ನಿಯಲ್ಲಿ ಕಾಮೆಂಟೇಟರ್ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…