ಕ್ರೀಡೆ

T20 worldcup: ಟಿ20 ವಿಶ್ವಕಪ್‌ ಟೂರ್ನಿಗಾಗಿ ಅಮೇರಿಕಾಕ್ಕೆ ಹಾರಿದ ಡಿಕೆ: ಪ್ಲೇಯರ್‌ ಆಗಿ ಅಲ್ಲ!

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ‌ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್‌ ನೀಡಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್‌ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ ಅಧಿಕೃತ ಖಾತೆಯಲ್ಲಿಂದು ಬಿಡುಗಡೆ ಮಾಡಿದೆ.

ಒಟ್ಟು 40 ಅನುಭಿವಗಳು ಕಾಮೆಂಟರಿ ಪ್ಯಾನಲ್‌ ಹಂಚಿಕೊಳ್ಳಲಿದ್ದಾರೆ. ಇದರಲ್ಲಿ ಟೀಂ ಇಂಡಿಯಾದ ನಾಲ್ವರು ಮಾಜಿ ಆಟಗಾರರು ಸ್ಥಾನ ಪಡೆದಿರುವುದು ವಿಶೇಷ. ಅದರಲ್ಲೂ ಈಗಷ್ಟೇ ಟಿ20 ಕ್ರಿಕೆಟ್‌ ಹಾಗೂ ಐಪಿಎಲ್‌ನಿಂದ ವಿದಾಯ ಹೇಳಿರುವ ಡಿಕೆ ಅಲಿಯಾಸ್‌ ದಿನೇಶ್‌ ಕಾರ್ತಿಕ್‌ ಅವರು ಸಹಾ ಈ ಪ್ಯಾನಲ್‌ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

https://x.com/ICC/status/1793945360215232697

ಹೌದು ಈಗಷ್ಟೇ ಆರ್‌ಸಿಬಿ ಪರ ಉತ್ತಮ ಪ್ರದರ್ಶನ ನೀಡಿ, ಆರ್‌ಸಿಬಿ ಜತೆಗೆ ತಮ್ಮ ಅಭಿಯಾನವನ್ನು ಮುಗಿಸಿ ದಿನೇಶ್‌ ಕಾರ್ತಿಕ್‌ ಅವರನ್ನು ಮತ್ತೆ ಕಾಮೆಂಟರಿ ಪ್ಯಾನೆಲ್‌ಗೆ ಆಯ್ಕೆ ಮಾಡಲಾಗಿದೆ. ಇವರನ್ನು ಸೇರಿದಂತೆ ಒಟ್ಟು ನಾಲ್ವರು ಭಾರತೀಯರನ್ನು ಈ ಬಾರಿ ವೀಕ್ಷಕ ವಿವರಣೆಗಾಗಿ ನೇಮಿಸಿದ್ದು, ಮಾಜಿ ಟೀಂ ಇಂಡಿಯಾ ಕೋಚ್‌ ರವಿ ಶಾಸ್ರ್ತಿ, ಸುನೀಲ್‌ ಗವಾಸ್ಕರ್‌, ಹರ್ಷಾ ಭೋಗ್ಲೆ ಮತ್ತು ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನ ಲಭಿಸಿದೆ. ಆದರೆ ಟೀಂ ಇಂಡಿಯಾದ ಬ್ಯಾಟರ್‌ ವಿರೇಂದ್ರ ಸೆಹ್ವಾಗ್‌ ಗೆ ಇಲ್ಲಿ ಸ್ಥಾನ ನೀಡಲಾಗಿಲ್ಲ.

ಉಳಿದಂತೆ ರಿಕ್ಕಿ ಪಾಂಟಿಂಗ್‌, ಇಯಾನ್‌ ಬಿಷಪ್‌, ನಾಸಿರ್‌ ಹುಸೇನ್‌, ಗ್ರೇಮ್‌ ಸ್ಮಿತ್‌, ಸ್ಟೀವ್‌ ಸ್ಮಿತ್‌ ಅಮೇರಿಕನ್‌ ಕಾಮೆಂಟೇಟರ್‌ ಜೇಮ್ಸ್‌ ಓʼಬ್ರೇನ್‌, ವರ್ಲ್ಡ್‌ಕಪ್‌ ವಿನ್ನರ್‌ ಇಯಾನ್‌ ಮಾರ್ಗನ್‌, ವಾಸಿ ಅಕ್ರಂ ಸೇರಿದಂತೆ ಹಲವು ಲೆಜೆಂಟ್‌ ಕ್ರಿಕೆಟರ್ಸ್‌ ಈ ಟೂರ್ನಿಯಲ್ಲಿ ಕಾಮೆಂಟೇಟರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago