ಕ್ರೀಡೆ

T20 worldcup: ಟಿ20 ವಿಶ್ವಕಪ್‌ ಟೂರ್ನಿಗಾಗಿ ಅಮೇರಿಕಾಕ್ಕೆ ಹಾರಿದ ಡಿಕೆ: ಪ್ಲೇಯರ್‌ ಆಗಿ ಅಲ್ಲ!

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ‌ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್‌ ನೀಡಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್‌ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ ಅಧಿಕೃತ ಖಾತೆಯಲ್ಲಿಂದು ಬಿಡುಗಡೆ ಮಾಡಿದೆ.

ಒಟ್ಟು 40 ಅನುಭಿವಗಳು ಕಾಮೆಂಟರಿ ಪ್ಯಾನಲ್‌ ಹಂಚಿಕೊಳ್ಳಲಿದ್ದಾರೆ. ಇದರಲ್ಲಿ ಟೀಂ ಇಂಡಿಯಾದ ನಾಲ್ವರು ಮಾಜಿ ಆಟಗಾರರು ಸ್ಥಾನ ಪಡೆದಿರುವುದು ವಿಶೇಷ. ಅದರಲ್ಲೂ ಈಗಷ್ಟೇ ಟಿ20 ಕ್ರಿಕೆಟ್‌ ಹಾಗೂ ಐಪಿಎಲ್‌ನಿಂದ ವಿದಾಯ ಹೇಳಿರುವ ಡಿಕೆ ಅಲಿಯಾಸ್‌ ದಿನೇಶ್‌ ಕಾರ್ತಿಕ್‌ ಅವರು ಸಹಾ ಈ ಪ್ಯಾನಲ್‌ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

https://x.com/ICC/status/1793945360215232697

ಹೌದು ಈಗಷ್ಟೇ ಆರ್‌ಸಿಬಿ ಪರ ಉತ್ತಮ ಪ್ರದರ್ಶನ ನೀಡಿ, ಆರ್‌ಸಿಬಿ ಜತೆಗೆ ತಮ್ಮ ಅಭಿಯಾನವನ್ನು ಮುಗಿಸಿ ದಿನೇಶ್‌ ಕಾರ್ತಿಕ್‌ ಅವರನ್ನು ಮತ್ತೆ ಕಾಮೆಂಟರಿ ಪ್ಯಾನೆಲ್‌ಗೆ ಆಯ್ಕೆ ಮಾಡಲಾಗಿದೆ. ಇವರನ್ನು ಸೇರಿದಂತೆ ಒಟ್ಟು ನಾಲ್ವರು ಭಾರತೀಯರನ್ನು ಈ ಬಾರಿ ವೀಕ್ಷಕ ವಿವರಣೆಗಾಗಿ ನೇಮಿಸಿದ್ದು, ಮಾಜಿ ಟೀಂ ಇಂಡಿಯಾ ಕೋಚ್‌ ರವಿ ಶಾಸ್ರ್ತಿ, ಸುನೀಲ್‌ ಗವಾಸ್ಕರ್‌, ಹರ್ಷಾ ಭೋಗ್ಲೆ ಮತ್ತು ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನ ಲಭಿಸಿದೆ. ಆದರೆ ಟೀಂ ಇಂಡಿಯಾದ ಬ್ಯಾಟರ್‌ ವಿರೇಂದ್ರ ಸೆಹ್ವಾಗ್‌ ಗೆ ಇಲ್ಲಿ ಸ್ಥಾನ ನೀಡಲಾಗಿಲ್ಲ.

ಉಳಿದಂತೆ ರಿಕ್ಕಿ ಪಾಂಟಿಂಗ್‌, ಇಯಾನ್‌ ಬಿಷಪ್‌, ನಾಸಿರ್‌ ಹುಸೇನ್‌, ಗ್ರೇಮ್‌ ಸ್ಮಿತ್‌, ಸ್ಟೀವ್‌ ಸ್ಮಿತ್‌ ಅಮೇರಿಕನ್‌ ಕಾಮೆಂಟೇಟರ್‌ ಜೇಮ್ಸ್‌ ಓʼಬ್ರೇನ್‌, ವರ್ಲ್ಡ್‌ಕಪ್‌ ವಿನ್ನರ್‌ ಇಯಾನ್‌ ಮಾರ್ಗನ್‌, ವಾಸಿ ಅಕ್ರಂ ಸೇರಿದಂತೆ ಹಲವು ಲೆಜೆಂಟ್‌ ಕ್ರಿಕೆಟರ್ಸ್‌ ಈ ಟೂರ್ನಿಯಲ್ಲಿ ಕಾಮೆಂಟೇಟರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

9 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

11 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

11 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

12 hours ago