ಕ್ರೀಡೆ

T20 worldcup: ಟಿ20 ವಿಶ್ವಕಪ್‌ ಟೂರ್ನಿಗಾಗಿ ಅಮೇರಿಕಾಕ್ಕೆ ಹಾರಿದ ಡಿಕೆ: ಪ್ಲೇಯರ್‌ ಆಗಿ ಅಲ್ಲ!

ನವದೆಹಲಿ: ಮುಂಬರುವ ಟಿ20 ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಐಸಿಸಿ‌ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್) ಈಗ ಮತ್ತೊಂದು ಅಪ್‌ಡೇಟ್‌ ನೀಡಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಗಾರರಾಗಿ ನೇಮಕಗೊಂಡಿರುವ ಅನುಭವಿ ಕಾಮೆಂಟೇಟರ್ಸ್‌ ಹಾಗೂ ಮಾಜಿ ಕ್ರಿಕೆಟಿಗರ ಪಟ್ಟಿಯನ್ನು ಐಸಿಸಿ ತನ್ನ ಅಧಿಕೃತ ಖಾತೆಯಲ್ಲಿಂದು ಬಿಡುಗಡೆ ಮಾಡಿದೆ.

ಒಟ್ಟು 40 ಅನುಭಿವಗಳು ಕಾಮೆಂಟರಿ ಪ್ಯಾನಲ್‌ ಹಂಚಿಕೊಳ್ಳಲಿದ್ದಾರೆ. ಇದರಲ್ಲಿ ಟೀಂ ಇಂಡಿಯಾದ ನಾಲ್ವರು ಮಾಜಿ ಆಟಗಾರರು ಸ್ಥಾನ ಪಡೆದಿರುವುದು ವಿಶೇಷ. ಅದರಲ್ಲೂ ಈಗಷ್ಟೇ ಟಿ20 ಕ್ರಿಕೆಟ್‌ ಹಾಗೂ ಐಪಿಎಲ್‌ನಿಂದ ವಿದಾಯ ಹೇಳಿರುವ ಡಿಕೆ ಅಲಿಯಾಸ್‌ ದಿನೇಶ್‌ ಕಾರ್ತಿಕ್‌ ಅವರು ಸಹಾ ಈ ಪ್ಯಾನಲ್‌ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

https://x.com/ICC/status/1793945360215232697

ಹೌದು ಈಗಷ್ಟೇ ಆರ್‌ಸಿಬಿ ಪರ ಉತ್ತಮ ಪ್ರದರ್ಶನ ನೀಡಿ, ಆರ್‌ಸಿಬಿ ಜತೆಗೆ ತಮ್ಮ ಅಭಿಯಾನವನ್ನು ಮುಗಿಸಿ ದಿನೇಶ್‌ ಕಾರ್ತಿಕ್‌ ಅವರನ್ನು ಮತ್ತೆ ಕಾಮೆಂಟರಿ ಪ್ಯಾನೆಲ್‌ಗೆ ಆಯ್ಕೆ ಮಾಡಲಾಗಿದೆ. ಇವರನ್ನು ಸೇರಿದಂತೆ ಒಟ್ಟು ನಾಲ್ವರು ಭಾರತೀಯರನ್ನು ಈ ಬಾರಿ ವೀಕ್ಷಕ ವಿವರಣೆಗಾಗಿ ನೇಮಿಸಿದ್ದು, ಮಾಜಿ ಟೀಂ ಇಂಡಿಯಾ ಕೋಚ್‌ ರವಿ ಶಾಸ್ರ್ತಿ, ಸುನೀಲ್‌ ಗವಾಸ್ಕರ್‌, ಹರ್ಷಾ ಭೋಗ್ಲೆ ಮತ್ತು ದಿನೇಶ್‌ ಕಾರ್ತಿಕ್‌ ಅವರಿಗೆ ಸ್ಥಾನ ಲಭಿಸಿದೆ. ಆದರೆ ಟೀಂ ಇಂಡಿಯಾದ ಬ್ಯಾಟರ್‌ ವಿರೇಂದ್ರ ಸೆಹ್ವಾಗ್‌ ಗೆ ಇಲ್ಲಿ ಸ್ಥಾನ ನೀಡಲಾಗಿಲ್ಲ.

ಉಳಿದಂತೆ ರಿಕ್ಕಿ ಪಾಂಟಿಂಗ್‌, ಇಯಾನ್‌ ಬಿಷಪ್‌, ನಾಸಿರ್‌ ಹುಸೇನ್‌, ಗ್ರೇಮ್‌ ಸ್ಮಿತ್‌, ಸ್ಟೀವ್‌ ಸ್ಮಿತ್‌ ಅಮೇರಿಕನ್‌ ಕಾಮೆಂಟೇಟರ್‌ ಜೇಮ್ಸ್‌ ಓʼಬ್ರೇನ್‌, ವರ್ಲ್ಡ್‌ಕಪ್‌ ವಿನ್ನರ್‌ ಇಯಾನ್‌ ಮಾರ್ಗನ್‌, ವಾಸಿ ಅಕ್ರಂ ಸೇರಿದಂತೆ ಹಲವು ಲೆಜೆಂಟ್‌ ಕ್ರಿಕೆಟರ್ಸ್‌ ಈ ಟೂರ್ನಿಯಲ್ಲಿ ಕಾಮೆಂಟೇಟರ್‌ಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

54 mins ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

3 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

3 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

3 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

4 hours ago