ಕ್ರೀಡೆ

ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹ್ವಾಗ್‌ ಕಿಡಿ

ಅಹಮದಾಬಾದ್: 2023ರ ಐಪಿಎಲ್ ಮುಗಿದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿದ್ದಾಗ ರವೀಂದ್ರ ಜಡೇಜಾ ಅವರು ಮೋಹಿತ್ ಶರ್ಮಾ ಅವರ ಎಸೆತಗಳನ್ನು ಸಿಕ್ಸ್ ಮತ್ತು ಫೋರ್ ಹೊಡೆದು ತಂಡಕ್ಕೆ ಜಯ ತಂದಿತ್ತರು.

ಈ ಬಗ್ಗೆ ಮಾತನಾಡಿದ ಮಾಜಿ ಆಟಗಾರ ವೀರೆಂದ್ರ ಸೆಹ್ವಾಗ್‌, ಈ ಸೋಲಿಗೆ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ದೂರಿದ್ದಾರೆ.

“ಕೆಲವರು ಚೆನ್ನಾಗಿ ಬೌಲಿಂಗ್ ಮಾಡುವಾಗ ಮತ್ತು ಯಾರ್ಕರ್‌ ಎಸೆಯುತ್ತಿರುವಾಗ, ನೀವು ಯಾಕೆ ಹೋಗಿ ಅವನೊಂದಿಗೆ ಮಾತನಾಡುತ್ತೀರಿ? ಬ್ಯಾಟರ್‌ಗೆ 2 ಬಾಲ್ ನಲ್ಲಿ 10 ಬೇಕು, ಈ ವೇಳೆ ಯಾರ್ಕರ್‌ ಹಾಕಬೇಕು ಎಂದು ಬೌಲರ್ ಗೆ ತಿಳಿದಿದೆ. ಹಾಗಾದರೆ ನೀವು ಅವನ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ? ಒಂದು ವೇಳೆ ಮೋಹಿತ್ ರನ್‌ ನೀಡುತ್ತಿದ್ದರೆ ಆಗ ಅವರು ಹೋಗಿ ಒಂದು ಮಾತು ಹೇಳಬಹುದಿತ್ತು, ಆದರೆ ಬೌಲರ್ ತನ್ನ ಕೆಲಸವನ್ನು ಮಾಡುತ್ತಿರುವಾಗ ನೀವು ಬೇಗನೆ ಓವರ್ ಅನ್ನು ಪೂರ್ಣಗೊಳಿಸಲು ಬಯಸುತ್ತೀರಿ” ಎಂದು ಸೆಹ್ವಾಗ್‌ ಹೇಳಿದರು.
ಸೆಹ್ವಾಗ್‌ ಮಾತ್ರವಲ್ಲದೆ ಸುನಿಲ್ ಗಾವಸ್ಕರ್ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಟೀಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಬೌಲರ್ ಮೋಹಿತ್ ಲಯ ತಪ್ಪಿಸಿದರು ಎಂದು ಗಾವಸ್ಕರ್ ದೂರಿದ್ದಾರೆ.
andolanait

Recent Posts

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

11 mins ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

20 mins ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

30 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

46 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

56 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

1 hour ago