ಕ್ರೀಡೆ

ಮೋಹಿತ್ ಜತೆ ಮಾತನಾಡಿದ್ದು ಹಾರ್ದಿಕ್ ಮಾಡಿದ ತಪ್ಪು: ಸೆಹ್ವಾಗ್‌ ಕಿಡಿ

ಅಹಮದಾಬಾದ್: 2023ರ ಐಪಿಎಲ್ ಮುಗಿದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿದ್ದಾಗ ರವೀಂದ್ರ ಜಡೇಜಾ ಅವರು ಮೋಹಿತ್ ಶರ್ಮಾ ಅವರ ಎಸೆತಗಳನ್ನು ಸಿಕ್ಸ್ ಮತ್ತು ಫೋರ್ ಹೊಡೆದು ತಂಡಕ್ಕೆ ಜಯ ತಂದಿತ್ತರು.

ಈ ಬಗ್ಗೆ ಮಾತನಾಡಿದ ಮಾಜಿ ಆಟಗಾರ ವೀರೆಂದ್ರ ಸೆಹ್ವಾಗ್‌, ಈ ಸೋಲಿಗೆ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ದೂರಿದ್ದಾರೆ.

“ಕೆಲವರು ಚೆನ್ನಾಗಿ ಬೌಲಿಂಗ್ ಮಾಡುವಾಗ ಮತ್ತು ಯಾರ್ಕರ್‌ ಎಸೆಯುತ್ತಿರುವಾಗ, ನೀವು ಯಾಕೆ ಹೋಗಿ ಅವನೊಂದಿಗೆ ಮಾತನಾಡುತ್ತೀರಿ? ಬ್ಯಾಟರ್‌ಗೆ 2 ಬಾಲ್ ನಲ್ಲಿ 10 ಬೇಕು, ಈ ವೇಳೆ ಯಾರ್ಕರ್‌ ಹಾಕಬೇಕು ಎಂದು ಬೌಲರ್ ಗೆ ತಿಳಿದಿದೆ. ಹಾಗಾದರೆ ನೀವು ಅವನ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ? ಒಂದು ವೇಳೆ ಮೋಹಿತ್ ರನ್‌ ನೀಡುತ್ತಿದ್ದರೆ ಆಗ ಅವರು ಹೋಗಿ ಒಂದು ಮಾತು ಹೇಳಬಹುದಿತ್ತು, ಆದರೆ ಬೌಲರ್ ತನ್ನ ಕೆಲಸವನ್ನು ಮಾಡುತ್ತಿರುವಾಗ ನೀವು ಬೇಗನೆ ಓವರ್ ಅನ್ನು ಪೂರ್ಣಗೊಳಿಸಲು ಬಯಸುತ್ತೀರಿ” ಎಂದು ಸೆಹ್ವಾಗ್‌ ಹೇಳಿದರು.
ಸೆಹ್ವಾಗ್‌ ಮಾತ್ರವಲ್ಲದೆ ಸುನಿಲ್ ಗಾವಸ್ಕರ್ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಟೀಕೆ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ಬೌಲರ್ ಮೋಹಿತ್ ಲಯ ತಪ್ಪಿಸಿದರು ಎಂದು ಗಾವಸ್ಕರ್ ದೂರಿದ್ದಾರೆ.
andolanait

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

5 mins ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

7 mins ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

9 mins ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

12 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

14 mins ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

18 mins ago