ಕ್ರೀಡೆ

ಅಫ್ಘಾನ್‌ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿರಾಟ್‌ ಬ್ಯಾಕ್‌!

ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿಗೆ ಸ್ಥಾನ ನೀಡಲಾಗಿದೆ.

ಇನ್ನು ಟೀಂ ಇಂಡಿಯಾ ನಾಯಕನಾಗಿ ರೋಹಿತ್‌ ಶರ್ಮಾ ಮುಂದುವರೆದಿದ್ದಾರೆ. ಹಲವಾರು ಟಿ20 ಪಂದ್ಯಗಳಿಂದ ವಿರಾಮ ಪಡೆದಿದ್ದ ವಿರಾಟ್‌ ಕೊಹ್ಲಿ ಮತ್ತೆ ಟಿ೨೦ ಫಾರ್ಮೇಟ್‌ನಲ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ವೇಗಿಗಳಾದ ಜಸ್‌ಪ್ರಿತ್‌ ಬುಮ್ರಾ ಮತ್ತು ಮೊಹಮ್ಮದ್‌ ಸಿರಾಜ್‌ ಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಮುಂಬರುವ ಟಿ20 ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಮಣೆ ಹಾಕಿದ್ದಾರೆ.

ಜನವರಿ 11 ರಂದು ಮೊಹಾಲಿಯ ಪಂಜಾಬ್‌ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಮೊಲದ ಟಿ20 ಪಂದ್ಯ ನಡೆಯಲಿದೆ. ಜನವರಿ 14 ರಂದು ಇಂದೋರ್‌ನ ಹೋಲ್ಕರ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯ ಮತ್ತು ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.

ಅಫ್ಘಾನ್‌ ವಿರುದ್ಧ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ವೈ. ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ವಾಷಿಂಗ್‌ಟನ್‌ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್‌ದೀಪ್‌ ಸಿಂಗ್ , ಅವೇಶ್ ಖಾನ್, ಮುಖೇಶ್ ಕುಮಾರ್

andolanait

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

13 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

13 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

14 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

14 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

14 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

14 hours ago