ಕ್ರೀಡೆ

ಅಫ್ಘಾನ್‌ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿರಾಟ್‌ ಬ್ಯಾಕ್‌!

ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿಗೆ ಸ್ಥಾನ ನೀಡಲಾಗಿದೆ.

ಇನ್ನು ಟೀಂ ಇಂಡಿಯಾ ನಾಯಕನಾಗಿ ರೋಹಿತ್‌ ಶರ್ಮಾ ಮುಂದುವರೆದಿದ್ದಾರೆ. ಹಲವಾರು ಟಿ20 ಪಂದ್ಯಗಳಿಂದ ವಿರಾಮ ಪಡೆದಿದ್ದ ವಿರಾಟ್‌ ಕೊಹ್ಲಿ ಮತ್ತೆ ಟಿ೨೦ ಫಾರ್ಮೇಟ್‌ನಲ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ವೇಗಿಗಳಾದ ಜಸ್‌ಪ್ರಿತ್‌ ಬುಮ್ರಾ ಮತ್ತು ಮೊಹಮ್ಮದ್‌ ಸಿರಾಜ್‌ ಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಮುಂಬರುವ ಟಿ20 ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಮಣೆ ಹಾಕಿದ್ದಾರೆ.

ಜನವರಿ 11 ರಂದು ಮೊಹಾಲಿಯ ಪಂಜಾಬ್‌ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಮೊಲದ ಟಿ20 ಪಂದ್ಯ ನಡೆಯಲಿದೆ. ಜನವರಿ 14 ರಂದು ಇಂದೋರ್‌ನ ಹೋಲ್ಕರ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯ ಮತ್ತು ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.

ಅಫ್ಘಾನ್‌ ವಿರುದ್ಧ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ವೈ. ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ವಾಷಿಂಗ್‌ಟನ್‌ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್‌ದೀಪ್‌ ಸಿಂಗ್ , ಅವೇಶ್ ಖಾನ್, ಮುಖೇಶ್ ಕುಮಾರ್

andolanait

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

3 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

3 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

3 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

3 hours ago