ಕ್ರೀಡೆ

ಅಫ್ಘಾನ್‌ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ರೋಹಿರಾಟ್‌ ಬ್ಯಾಕ್‌!

ನವದೆಹಲಿ: ಅಫ್ಘಾನಿಸ್ತಾನದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ತಂಡದಲ್ಲಿ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿಗೆ ಸ್ಥಾನ ನೀಡಲಾಗಿದೆ.

ಇನ್ನು ಟೀಂ ಇಂಡಿಯಾ ನಾಯಕನಾಗಿ ರೋಹಿತ್‌ ಶರ್ಮಾ ಮುಂದುವರೆದಿದ್ದಾರೆ. ಹಲವಾರು ಟಿ20 ಪಂದ್ಯಗಳಿಂದ ವಿರಾಮ ಪಡೆದಿದ್ದ ವಿರಾಟ್‌ ಕೊಹ್ಲಿ ಮತ್ತೆ ಟಿ೨೦ ಫಾರ್ಮೇಟ್‌ನಲ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ವೇಗಿಗಳಾದ ಜಸ್‌ಪ್ರಿತ್‌ ಬುಮ್ರಾ ಮತ್ತು ಮೊಹಮ್ಮದ್‌ ಸಿರಾಜ್‌ ಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಮುಂಬರುವ ಟಿ20 ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಬಿಸಿಸಿಐ ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಮಣೆ ಹಾಕಿದ್ದಾರೆ.

ಜನವರಿ 11 ರಂದು ಮೊಹಾಲಿಯ ಪಂಜಾಬ್‌ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಮೊಲದ ಟಿ20 ಪಂದ್ಯ ನಡೆಯಲಿದೆ. ಜನವರಿ 14 ರಂದು ಇಂದೋರ್‌ನ ಹೋಲ್ಕರ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಎರಡನೇ ಟಿ20 ಪಂದ್ಯ ಮತ್ತು ಜನವರಿ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೂರನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ.

ಅಫ್ಘಾನ್‌ ವಿರುದ್ಧ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ: ರೋಹಿತ್ ಶರ್ಮಾ (ನಾಯಕ) ಶುಭ್ ಮನ್ ಗಿಲ್, ವೈ. ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಶಿವಂ ದುಬೆ, ವಾಷಿಂಗ್‌ಟನ್‌ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್‌ದೀಪ್‌ ಸಿಂಗ್ , ಅವೇಶ್ ಖಾನ್, ಮುಖೇಶ್ ಕುಮಾರ್

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

5 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

6 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago