ಕ್ರೀಡೆ

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಗೆ ಸ್ಥಾನ

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ.

ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು ನವದೀಪ್ ಸೈನಿಗೆ ಸ್ಥಾನ ನೀಡಲಾಗಿದೆ.

ಇದೇ ಜುಲೈ 12ರಿಂದ ಆಗಸ್ಟ್ 13ರವರೆಗೆ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಿದೆ. ಜುಲೈ 12ರಿಂದ ಟೆಸ್ಟ್ ಪಂದ್ಯಗಳು ಆರಂಭವಾಗಲಿದ್ದು, ಜುಲೈ 27ರಿಂದ ಏಕದಿನ ಸರಣಿ ಮತ್ತು ಆಗಸ್ಟ್ 3ರಿಂದ ಟಿ20 ಸರಣಿ ಆರಂಭವಾಗಲಿದೆ.

ಉಳಿದಂತೆ ತಂಡಗಳು ಇಂತಿವೆ.
ಟೆಸ್ಟ್ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ವಿಕೆಟ್ ಕೀಪರ್), ಕೆಎಸ್ ಭರತ್ (ವಾಕ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ , ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಏಕದಿನ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (wk), ಇಶಾನ್ ಕಿಶನ್ (wk), ಹಾರ್ದಿಕ್ ಪಾಂಡ್ಯ (VC), ಶಾರ್ದೂಲ್ ಠಾಕೂರ್, ಆರ್ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago