ಕ್ರೀಡೆ

Women’s T20 Worldcup 2024| ಟೀಂ ಇಂಡಿಯಾ ಪ್ರಕಟ: ಹರ್ಮನ್‌ಪ್ರೀತ್‌ ಕೌರ್‌ ನಾಯಕಿ!

ನವದೆಹಲಿ: ಇದೇ ಅಕ್ಟೋಬರ್‌ 3ರಿಂದ 20 ವರೆಗೆ ನಡೆಯಲಿರುವ ಮಹಿಳೆಯರ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಹದಿನೈದು ಸದಸ್ಯರ ಬಲ ಹೊಂದಿರುವ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯೂ ಸಹಾ ಹರ್ಮನ್‌ಪ್ರೀತ್‌ ಕೌರ್‌ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಮತ್ತು ತಂಡಕ್ಕೆ ಉಪ ನಾಯಕಿಯಾಗಿ ಸ್ಮೃತಿ ಮಂದಾನ ಅವರು ಆಯ್ಕೆಯಾಗಿದ್ದಾರೆ.

ಇನ್ನು ಈ ಹದಿನೈದು ಸದಸ್ಯರನ್ನೊಳಗೊಂಡ ತಂಡದಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಅವರು ಸ್ಥಾನ ಪಡೆದಿದ್ದಾರೆ.

2009 ರಿಂದ ಇಲ್ಲಿಯವರೆಗೆ ಒಟ್ಟು 9 ಬಾರಿ ಮಹಿಳಾ ವಿಶ್ವಕಪ್‌ ಆಯೋಜನೆಯಾಗಿದ್ದು, ಇದರಲ್ಲಿ ಆಸ್ಟ್ರೇಲಿಯಾ ಬರೋಬ್ಬರಿ 6 ಬಾರಿ ವಿಶ್ವ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ. ಇತ್ತ ಭಾರತ ಈವರೆಗೆ ಒಂದೇ ಒಂದು ವಿಶ್ವಕಪ್‌ ಗೆಲ್ಲುವಲ್ಲಿ ಸಾಧ್ಯವಾಗಿಲ್ಲ. 2020ರ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್ಸ್‌ ತಲುಪಿದ್ದೇ ಟೀಂ ಇಂಡಿಯಾದ ಸಾಧನೆಯಾಗಿದೆ.

ಇಂತಿದೆ ಟೀಂ ಇಂಡಿಯಾ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿ.ಕೀ), ಯಾಸ್ತಿಕಾ ಭಾಟಿಯಾ (ವಿ.ಕೀ), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

1 hour ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

1 hour ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago