ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ.
ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ
ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್ ಹಾಕಲಾಗುವುದು.
ಈ ಪಂದ್ಯವನ್ನು ಸೋನಿ ನೆಟ್ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್ನಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಜತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.
ಭಾರತ ತಂಡಕ್ಕೆ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು, ವಿಜಯ ಸಾಧಿಸಿದರೇ ಮಾತ್ರ ಸರಣಿಯಲ್ಲಿ ಸಮಬಲ ಸಾಧಿಸಿದಂತಾಗುತ್ತದೆ. ಇಲ್ಲದಿದ್ದರೇ ಬಾಂಗ್ಲಾ ಸರಣಿ ಗೆದ್ದಂತಾಗುತ್ತದೆ.
2023ರ ವಿಶ್ವಕಪ್ಗಾಗಿ ಬಾಂಗ್ಲಾದೇಶ ವಿರುದ್ಧದ ಈ ಸರಣಿಯು ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.
ವಿಶ್ವಕಪ್ಗೆ ಆತಿಥ್ಯ ವಹಿಸಲಿರುವ ಭಾರತವು ಈಗಾಗಲೇ ಏಕದಿನ ವಿಶ್ವಕಪ್ ಸೂಪರ್ ಲೀಗ್ಗೆ ಅರ್ಹತೆ ಪಡೆದಿದೆ.
ಪಿಚ್ ಹೇಗಿದೆ ?
ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಐದು ಏಕದಿನ ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 212 ರನ್ ಆಗಿದೆ. ಮೊದಲು ಬ್ಯಾಟ್ ಮಾಡಿರುವ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಸ್ಪಿನ್ನರ್ಗಳು ಈ ಪಿಚ್ ನಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಟಾಸ್ ಗೆಲ್ಲುವ ತಂಡದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.
ತಂಡದಲ್ಲಿ ಬದಲಾವಣೆ ಸಾಧ್ಯತೆ:
ಸರಣಿಯಲ್ಲಿ ಟೀಂ ಇಂಡಿಯಾ ಜೀವಂತವಾಗಿರಲು ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಆದ್ದರಿಂದ ಮೊದಲ ಪಂದ್ಯದಲ್ಲಿ ಆಡಿದ ಕೆಲ ಆಟಗಾರರನ್ನು ಬದಲಿಸುವ ಸಾಧ್ಯತೆ ಇದೆ. ಉಮ್ರಾನ್ ಮಲಿಕ್ ಅವರಿಗೆ ಅವಕಾಶ ಸಿಗುವ ಸಂಭವವಿದೆ. ವೇಗದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲಬರಲಿದೆ.
ಹವಾಮಾನ ಹೇಗಿದೆ ?
ಈ ಪಂದ್ಯದ ವೇಳೆ ಮಳೆಯ ಮುನ್ಸೂಚನೆ ಇಲ್ಲ. ಮೀರ್ಪುರದಲ್ಲಿ ತಂಪಾದ ವಾತಾವರಣ ಇದೆ. ಆದ್ದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಸಂಭಾವ್ಯ ತಂಡ 11:
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.
ಬಾಂಗ್ಲಾದೇಶ :
ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾಯಕ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…
ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್ಪಾತ್ನಲ್ಲಿರುವ ಮ್ಯಾನ್ ಹೋಲ್ನಲ್ಲಿ ಕಸ…
ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…
ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…