ಕ್ರೀಡೆ

ಟೀಂ ಇಂಡಿಯಾ- ಬಾಂಗ್ಲಾ ನಡುವೆ ಇಂದು 2ನೇ ಏಕದಿನ ಪಂದ್ಯ: ಭಾರತಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ

ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ.

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ

ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್​ ಹಾಕಲಾಗುವುದು.

ಈ ಪಂದ್ಯವನ್ನು ಸೋನಿ ನೆಟ್‌ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಜತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.

ಭಾರತ ತಂಡಕ್ಕೆ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು, ವಿಜಯ ಸಾಧಿಸಿದರೇ ಮಾತ್ರ ಸರಣಿಯಲ್ಲಿ ಸಮಬಲ ಸಾಧಿಸಿದಂತಾಗುತ್ತದೆ. ಇಲ್ಲದಿದ್ದರೇ ಬಾಂಗ್ಲಾ ಸರಣಿ ಗೆದ್ದಂತಾಗುತ್ತದೆ.

2023ರ ವಿಶ್ವಕಪ್‌ಗಾಗಿ ಬಾಂಗ್ಲಾದೇಶ ವಿರುದ್ಧದ ಈ ಸರಣಿಯು ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.

ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಭಾರತವು ಈಗಾಗಲೇ ಏಕದಿನ ವಿಶ್ವಕಪ್ ಸೂಪರ್ ಲೀಗ್‌ಗೆ ಅರ್ಹತೆ ಪಡೆದಿದೆ.

  ಪಿಚ್​ ಹೇಗಿದೆ ? 

ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಐದು ಏಕದಿನ ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 212 ರನ್ ಆಗಿದೆ. ಮೊದಲು ಬ್ಯಾಟ್ ಮಾಡಿರುವ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಸ್ಪಿನ್ನರ್‌ಗಳು ಈ ಪಿಚ್ ನಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಟಾಸ್​ ಗೆಲ್ಲುವ ತಂಡದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ತಂಡದಲ್ಲಿ ಬದಲಾವಣೆ ಸಾಧ್ಯತೆ:

ಸರಣಿಯಲ್ಲಿ ಟೀಂ ಇಂಡಿಯಾ ಜೀವಂತವಾಗಿರಲು ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಆದ್ದರಿಂದ ಮೊದಲ ಪಂದ್ಯದಲ್ಲಿ ಆಡಿದ ಕೆಲ ಆಟಗಾರರನ್ನು ಬದಲಿಸುವ ಸಾಧ್ಯತೆ ಇದೆ. ಉಮ್ರಾನ್ ಮಲಿಕ್​ ಅವರಿಗೆ ಅವಕಾಶ ಸಿಗುವ ಸಂಭವವಿದೆ. ವೇಗದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲಬರಲಿದೆ.

ಹವಾಮಾನ ಹೇಗಿದೆ ?

ಈ ಪಂದ್ಯದ ವೇಳೆ ಮಳೆಯ ಮುನ್ಸೂಚನೆ ಇಲ್ಲ. ಮೀರ್‌ಪುರದಲ್ಲಿ ತಂಪಾದ ವಾತಾವರಣ ಇದೆ. ಆದ್ದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

 ಸಂಭಾವ್ಯ ತಂಡ 11:

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.

ಬಾಂಗ್ಲಾದೇಶ :

ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾಯಕ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.

andolana

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

2 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

2 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

3 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

4 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

4 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

4 hours ago