ಕ್ರೀಡೆ

ಟೀಂ ಇಂಡಿಯಾ- ಬಾಂಗ್ಲಾ ನಡುವೆ ಇಂದು 2ನೇ ಏಕದಿನ ಪಂದ್ಯ: ಭಾರತಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ

ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ.

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ

ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್​ ಹಾಕಲಾಗುವುದು.

ಈ ಪಂದ್ಯವನ್ನು ಸೋನಿ ನೆಟ್‌ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಜತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.

ಭಾರತ ತಂಡಕ್ಕೆ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು, ವಿಜಯ ಸಾಧಿಸಿದರೇ ಮಾತ್ರ ಸರಣಿಯಲ್ಲಿ ಸಮಬಲ ಸಾಧಿಸಿದಂತಾಗುತ್ತದೆ. ಇಲ್ಲದಿದ್ದರೇ ಬಾಂಗ್ಲಾ ಸರಣಿ ಗೆದ್ದಂತಾಗುತ್ತದೆ.

2023ರ ವಿಶ್ವಕಪ್‌ಗಾಗಿ ಬಾಂಗ್ಲಾದೇಶ ವಿರುದ್ಧದ ಈ ಸರಣಿಯು ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.

ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಭಾರತವು ಈಗಾಗಲೇ ಏಕದಿನ ವಿಶ್ವಕಪ್ ಸೂಪರ್ ಲೀಗ್‌ಗೆ ಅರ್ಹತೆ ಪಡೆದಿದೆ.

  ಪಿಚ್​ ಹೇಗಿದೆ ? 

ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಐದು ಏಕದಿನ ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 212 ರನ್ ಆಗಿದೆ. ಮೊದಲು ಬ್ಯಾಟ್ ಮಾಡಿರುವ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಸ್ಪಿನ್ನರ್‌ಗಳು ಈ ಪಿಚ್ ನಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಟಾಸ್​ ಗೆಲ್ಲುವ ತಂಡದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ತಂಡದಲ್ಲಿ ಬದಲಾವಣೆ ಸಾಧ್ಯತೆ:

ಸರಣಿಯಲ್ಲಿ ಟೀಂ ಇಂಡಿಯಾ ಜೀವಂತವಾಗಿರಲು ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಆದ್ದರಿಂದ ಮೊದಲ ಪಂದ್ಯದಲ್ಲಿ ಆಡಿದ ಕೆಲ ಆಟಗಾರರನ್ನು ಬದಲಿಸುವ ಸಾಧ್ಯತೆ ಇದೆ. ಉಮ್ರಾನ್ ಮಲಿಕ್​ ಅವರಿಗೆ ಅವಕಾಶ ಸಿಗುವ ಸಂಭವವಿದೆ. ವೇಗದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲಬರಲಿದೆ.

ಹವಾಮಾನ ಹೇಗಿದೆ ?

ಈ ಪಂದ್ಯದ ವೇಳೆ ಮಳೆಯ ಮುನ್ಸೂಚನೆ ಇಲ್ಲ. ಮೀರ್‌ಪುರದಲ್ಲಿ ತಂಪಾದ ವಾತಾವರಣ ಇದೆ. ಆದ್ದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

 ಸಂಭಾವ್ಯ ತಂಡ 11:

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.

ಬಾಂಗ್ಲಾದೇಶ :

ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾಯಕ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.

andolana

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

3 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

3 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

3 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

13 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

13 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

14 hours ago