ಕ್ರೀಡೆ

ಟೀಂ ಇಂಡಿಯಾ- ಬಾಂಗ್ಲಾ ನಡುವೆ ಇಂದು 2ನೇ ಏಕದಿನ ಪಂದ್ಯ: ಭಾರತಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ

ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ.

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ

ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್​ ಹಾಕಲಾಗುವುದು.

ಈ ಪಂದ್ಯವನ್ನು ಸೋನಿ ನೆಟ್‌ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಜತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.

ಭಾರತ ತಂಡಕ್ಕೆ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು, ವಿಜಯ ಸಾಧಿಸಿದರೇ ಮಾತ್ರ ಸರಣಿಯಲ್ಲಿ ಸಮಬಲ ಸಾಧಿಸಿದಂತಾಗುತ್ತದೆ. ಇಲ್ಲದಿದ್ದರೇ ಬಾಂಗ್ಲಾ ಸರಣಿ ಗೆದ್ದಂತಾಗುತ್ತದೆ.

2023ರ ವಿಶ್ವಕಪ್‌ಗಾಗಿ ಬಾಂಗ್ಲಾದೇಶ ವಿರುದ್ಧದ ಈ ಸರಣಿಯು ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.

ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಭಾರತವು ಈಗಾಗಲೇ ಏಕದಿನ ವಿಶ್ವಕಪ್ ಸೂಪರ್ ಲೀಗ್‌ಗೆ ಅರ್ಹತೆ ಪಡೆದಿದೆ.

  ಪಿಚ್​ ಹೇಗಿದೆ ? 

ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಐದು ಏಕದಿನ ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 212 ರನ್ ಆಗಿದೆ. ಮೊದಲು ಬ್ಯಾಟ್ ಮಾಡಿರುವ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಸ್ಪಿನ್ನರ್‌ಗಳು ಈ ಪಿಚ್ ನಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಟಾಸ್​ ಗೆಲ್ಲುವ ತಂಡದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ತಂಡದಲ್ಲಿ ಬದಲಾವಣೆ ಸಾಧ್ಯತೆ:

ಸರಣಿಯಲ್ಲಿ ಟೀಂ ಇಂಡಿಯಾ ಜೀವಂತವಾಗಿರಲು ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಆದ್ದರಿಂದ ಮೊದಲ ಪಂದ್ಯದಲ್ಲಿ ಆಡಿದ ಕೆಲ ಆಟಗಾರರನ್ನು ಬದಲಿಸುವ ಸಾಧ್ಯತೆ ಇದೆ. ಉಮ್ರಾನ್ ಮಲಿಕ್​ ಅವರಿಗೆ ಅವಕಾಶ ಸಿಗುವ ಸಂಭವವಿದೆ. ವೇಗದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲಬರಲಿದೆ.

ಹವಾಮಾನ ಹೇಗಿದೆ ?

ಈ ಪಂದ್ಯದ ವೇಳೆ ಮಳೆಯ ಮುನ್ಸೂಚನೆ ಇಲ್ಲ. ಮೀರ್‌ಪುರದಲ್ಲಿ ತಂಪಾದ ವಾತಾವರಣ ಇದೆ. ಆದ್ದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

 ಸಂಭಾವ್ಯ ತಂಡ 11:

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.

ಬಾಂಗ್ಲಾದೇಶ :

ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾಯಕ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.

andolana

Recent Posts

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

12 mins ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

1 hour ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

2 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

2 hours ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

4 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

5 hours ago