ಕ್ರೀಡೆ

ಟೀಂ ಇಂಡಿಯಾ- ಬಾಂಗ್ಲಾ ನಡುವೆ ಇಂದು 2ನೇ ಏಕದಿನ ಪಂದ್ಯ: ಭಾರತಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ

ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ.

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ

ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್​ ಹಾಕಲಾಗುವುದು.

ಈ ಪಂದ್ಯವನ್ನು ಸೋನಿ ನೆಟ್‌ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಜತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.

ಭಾರತ ತಂಡಕ್ಕೆ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು, ವಿಜಯ ಸಾಧಿಸಿದರೇ ಮಾತ್ರ ಸರಣಿಯಲ್ಲಿ ಸಮಬಲ ಸಾಧಿಸಿದಂತಾಗುತ್ತದೆ. ಇಲ್ಲದಿದ್ದರೇ ಬಾಂಗ್ಲಾ ಸರಣಿ ಗೆದ್ದಂತಾಗುತ್ತದೆ.

2023ರ ವಿಶ್ವಕಪ್‌ಗಾಗಿ ಬಾಂಗ್ಲಾದೇಶ ವಿರುದ್ಧದ ಈ ಸರಣಿಯು ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.

ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಭಾರತವು ಈಗಾಗಲೇ ಏಕದಿನ ವಿಶ್ವಕಪ್ ಸೂಪರ್ ಲೀಗ್‌ಗೆ ಅರ್ಹತೆ ಪಡೆದಿದೆ.

  ಪಿಚ್​ ಹೇಗಿದೆ ? 

ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಐದು ಏಕದಿನ ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 212 ರನ್ ಆಗಿದೆ. ಮೊದಲು ಬ್ಯಾಟ್ ಮಾಡಿರುವ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಸ್ಪಿನ್ನರ್‌ಗಳು ಈ ಪಿಚ್ ನಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಟಾಸ್​ ಗೆಲ್ಲುವ ತಂಡದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ತಂಡದಲ್ಲಿ ಬದಲಾವಣೆ ಸಾಧ್ಯತೆ:

ಸರಣಿಯಲ್ಲಿ ಟೀಂ ಇಂಡಿಯಾ ಜೀವಂತವಾಗಿರಲು ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಆದ್ದರಿಂದ ಮೊದಲ ಪಂದ್ಯದಲ್ಲಿ ಆಡಿದ ಕೆಲ ಆಟಗಾರರನ್ನು ಬದಲಿಸುವ ಸಾಧ್ಯತೆ ಇದೆ. ಉಮ್ರಾನ್ ಮಲಿಕ್​ ಅವರಿಗೆ ಅವಕಾಶ ಸಿಗುವ ಸಂಭವವಿದೆ. ವೇಗದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲಬರಲಿದೆ.

ಹವಾಮಾನ ಹೇಗಿದೆ ?

ಈ ಪಂದ್ಯದ ವೇಳೆ ಮಳೆಯ ಮುನ್ಸೂಚನೆ ಇಲ್ಲ. ಮೀರ್‌ಪುರದಲ್ಲಿ ತಂಪಾದ ವಾತಾವರಣ ಇದೆ. ಆದ್ದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

 ಸಂಭಾವ್ಯ ತಂಡ 11:

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.

ಬಾಂಗ್ಲಾದೇಶ :

ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾಯಕ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago