ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನ ಸೂಪರ್-8ನಲ್ಲಿ ಮುಖಾಮುಖಿಯಾಗಿದ್ದ ಭಾರತ ಹಾಗೂ ಅಫ್ಘಾನಿಸ್ತಾನ್ ನಡುವಿನ ಪಂದ್ಯದಲ್ಲಿ ಅಫ್ಘನ್ ವಿರುದ್ಧ ಟೀಂ ಇಂಡಿಯಾ 47 ರನ್ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 181 ರನ್ಗಳಿಸಿ 182 ರನ್ಗಳ ಗುರಿ ನೀಡಿತು. ಈ ಬೃಹತ್ ಮೊತ್ತ ಬೆನ್ನತ್ತಿದ ಅಫ್ಘಾನಿಸ್ತಾನ್ 20 ಓವರ್ಗಳಲ್ಲಿ ಆಲ್ಔಟ್ ಆಗುವ ಮೂಲಕ 134ರನ್ ಗಳಿಸಿ 47 ರನ್ಗಳ ಅಂತರದಿಂದ ಸೋಲು ಕಂಡಿದೆ.
ಟೀಂ ಇಂಡಿಯಾ ಇನ್ನಿಂಗ್ಸ್: ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರು. ರೋಹಿತ್ 8(13) ರನ್, ವಿರಾಟ್ ಕೊಹ್ಲಿ 24(24)ರನ್ ಗಳಿಸಿದರು. ಈ ಇಬ್ಬರು ಆರಂಭಿಕರ ನಿರ್ಗಮನದ ಬಳಿಕ ಬಂದ ರಿಷಭ್ ಪಂತ್ 20(11)ರನ್ ಗಳಿಸಿದರೇ, ಒಂಟಿಯಾಗಿ ಇನ್ನಿಂಗ್ಸ್ ಕಟ್ಟಿದ ಸೂರ್ಯಕುಮಾರ್ ಯಾದವ್ 28ಎಸೆತಗಳಲ್ಲಿ 5ಬೌಂಡರಿ ಹಾಗೂ 3ಸಿಕ್ಸರ್ ಸಹಿತ 53 ರನ್ ಗಳಿಸಿ ಔಟಾದರು.
ಉಳಿದಂತೆ ಶಿವಂ ದುಬೆ 10(7) ರನ್, ಹಾರ್ದಿಕ್ ಪಾಂಡ್ಯ 32(24) ರನ್, ರವೀಂದ್ರ ಜಡೇಜಾ 7(5)ರನ್, ಅಕ್ಷರ್ ಪಟೇಲ್ 12(6)ರನ್ ಹಾಗೂ ಅರ್ಷ್ದೀಪ್ ಔಟಾಗದೇ 2(2) ರನ್ ಗಳಿಸಿದರು.
ಅಫ್ಘನ್ ಪರ ನಾಯಕ ರಶೀದ್ ಖಾನ್ ಹಾಗೂ ಫರೂಖಿ ತಲಾ 3 ವಿಕೆಟ್, ನವೀನ್ ಉಲ್-ಹಕ್ ಒಂದು ವಿಕೆಟ್ ಪಡೆದು ಗಮನ ಸೆಳೆದರು.
ಅಫ್ಘಾನಿಸ್ತಾನ್ ಇನ್ನಿಂಗ್ಸ್: ಟೀಂ ಇಂಡಿಯಾ ನೀಡಿದ ಬೃಹತ್ ಬೆನ್ನತ್ತಿದ ಅಫ್ಘಾನಿಸ್ತಾನಕ್ಕೆ ಆರಂಭಿಕ ಆಘಾತ ಎದುರಾಯಿತು. ಅರ್ಜತ್ತುಲ್ಲಾ ಝಾಝಿ 2(4) ಬುಮ್ರಾ ಅವರ ಮೊದಲ ಓವರ್ನಲ್ಲೇ ವಿಕೆಟ್ ಒಪ್ಪಿಸಿ ಹೊರ ನಡೆದರು. ಗುರ್ಬಾಜ್ 11(8)ರನ್, ಜರ್ದಾನ್ 8(11) ರನ್ ಗಳಿಸಿ ಔಟಾದರು. ಅಫ್ಘನ್ ಪವರ್ ಪ್ಲೇನಲ್ಲಿ ಕೇವಲ 23ರನ್ ಗಳಿಸಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ತಂಡದ ಪರವಾಗಿ ಓಮರ್ಜಾಯ್ 26(20)ರನ್ ಗಳಿಸಿದ್ದೆ ಅತಿಹೆಚ್ಚು ರನ್ ಆಗಿತ್ತು. ಗಲ್ಬದಿನ್ ನೈಬ್ 17(21) ರನ್, ಜರ್ದಾನ್ 19(17) ರನ್, ಮೊಹಮದ್ ನಬಿ 14(14) ರನ್, ನಾಯಕರ ರಶೀದ್ ಖಾನ್ 2(6) ರನ್, ನೂರ್ ಅಹ್ಮದ್ 12(18) ರನ್, ನವೀನ್ ಉಲ್-ಹಕ್ ಶೂನ್ಯಕ್ಕೆ ಔಟಾದರೇ, ಫರೂಕಿ ಔಟಾಗದೇ 4(1) ರನ್ ಗಳಿಸಿದರು.
ಟೀಂ ಇಂಡಿಯಾ ಪರ ಜಸ್ಪ್ರಿತ್ ಬುಮ್ರಾ 4 ಓವರ್ ಬೌಲಿಂಗ್ ಮಾಡಿ ಕೇವಲ 7 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು. ಅರ್ಷದೀಪ್ 3 ವಿಕೆಟ್, ಕುಲ್ದೀಪ್ ಯಾದವ್ 2 ವಿಕೆಟ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದೊಂದು ಪಡೆದು ಮಿಂಚಿದರು.
ಪಂದ್ಯ ಶ್ರೇಷ್ಠ: ಸೂರ್ಯಕುಮಾರ್ ಯಾದವ್
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…