ಕ್ರೀಡೆ

ICC t20 worldcup 2024: ಸೂಪರ್‌-8 ನ ಮೊದಲ ಪಂದ್ಯ ಗೆದ್ದ ಟೀಂ ಇಂಡಿಯಾ

ಬಾರ್ಬಡೋಸ್‌: ಇಲ್ಲಿನ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ನ ಸೂಪರ್‌-8ನಲ್ಲಿ ಮುಖಾಮುಖಿಯಾಗಿದ್ದ ಭಾರತ ಹಾಗೂ ಅಫ್ಘಾನಿಸ್ತಾನ್‌ ನಡುವಿನ ಪಂದ್ಯದಲ್ಲಿ ಅಫ್ಘನ್‌ ವಿರುದ್ಧ ಟೀಂ ಇಂಡಿಯಾ 47 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 181 ರನ್‌ಗಳಿಸಿ 182 ರನ್‌ಗಳ ಗುರಿ ನೀಡಿತು. ಈ ಬೃಹತ್‌ ಮೊತ್ತ ಬೆನ್ನತ್ತಿದ ಅಫ್ಘಾನಿಸ್ತಾನ್‌ 20 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 134ರನ್‌ ಗಳಿಸಿ 47 ರನ್‌ಗಳ ಅಂತರದಿಂದ ಸೋಲು ಕಂಡಿದೆ.

ಟೀಂ ಇಂಡಿಯಾ ಇನ್ನಿಂಗ್ಸ್‌: ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ಪರ ನಾಯಕ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರು. ರೋಹಿತ್‌ 8(13) ರನ್‌, ವಿರಾಟ್‌ ಕೊಹ್ಲಿ 24(24)ರನ್‌ ಗಳಿಸಿದರು. ಈ ಇಬ್ಬರು ಆರಂಭಿಕರ ನಿರ್ಗಮನದ ಬಳಿಕ ಬಂದ ರಿಷಭ್‌ ಪಂತ್‌ 20(11)ರನ್‌ ಗಳಿಸಿದರೇ, ಒಂಟಿಯಾಗಿ ಇನ್ನಿಂಗ್ಸ್‌ ಕಟ್ಟಿದ ಸೂರ್ಯಕುಮಾರ್‌ ಯಾದವ್‌ 28ಎಸೆತಗಳಲ್ಲಿ 5ಬೌಂಡರಿ ಹಾಗೂ 3ಸಿಕ್ಸರ್‌ ಸಹಿತ 53 ರನ್‌ ಗಳಿಸಿ ಔಟಾದರು.

ಉಳಿದಂತೆ ಶಿವಂ ದುಬೆ 10(7) ರನ್‌, ಹಾರ್ದಿಕ್‌ ಪಾಂಡ್ಯ 32(24) ರನ್‌, ರವೀಂದ್ರ ಜಡೇಜಾ 7(5)ರನ್‌, ಅಕ್ಷರ್‌ ಪಟೇಲ್‌ 12(6)ರನ್‌ ಹಾಗೂ ಅರ್ಷ್‌ದೀಪ್‌ ಔಟಾಗದೇ 2(2) ರನ್‌ ಗಳಿಸಿದರು.

ಅಫ್ಘನ್‌ ಪರ ನಾಯಕ ರಶೀದ್‌ ಖಾನ್‌ ಹಾಗೂ ಫರೂಖಿ ತಲಾ 3 ವಿಕೆಟ್‌, ನವೀನ್‌ ಉಲ್‌-ಹಕ್‌ ಒಂದು ವಿಕೆಟ್‌ ಪಡೆದು ಗಮನ ಸೆಳೆದರು.

ಅಫ್ಘಾನಿಸ್ತಾನ್‌ ಇನ್ನಿಂಗ್ಸ್‌: ಟೀಂ ಇಂಡಿಯಾ ನೀಡಿದ ಬೃಹತ್‌ ಬೆನ್ನತ್ತಿದ ಅಫ್ಘಾನಿಸ್ತಾನಕ್ಕೆ ಆರಂಭಿಕ ಆಘಾತ ಎದುರಾಯಿತು. ಅರ್ಜತ್ತುಲ್ಲಾ ಝಾಝಿ 2(4) ಬುಮ್ರಾ ಅವರ ಮೊದಲ ಓವರ್‌ನಲ್ಲೇ ವಿಕೆಟ್‌ ಒಪ್ಪಿಸಿ ಹೊರ ನಡೆದರು. ಗುರ್ಬಾಜ್‌ 11(8)ರನ್‌, ಜರ್ದಾನ್‌ 8(11) ರನ್‌ ಗಳಿಸಿ ಔಟಾದರು. ಅಫ್ಘನ್‌ ಪವರ್‌ ಪ್ಲೇನಲ್ಲಿ ಕೇವಲ 23ರನ್‌ ಗಳಿಸಿ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ತಂಡದ ಪರವಾಗಿ ಓಮರ್ಜಾಯ್‌ 26(20)ರನ್‌ ಗಳಿಸಿದ್ದೆ ಅತಿಹೆಚ್ಚು ರನ್‌ ಆಗಿತ್ತು. ಗಲ್ಬದಿನ್‌ ನೈಬ್‌ 17(21) ರನ್‌, ಜರ್ದಾನ್‌ 19(17) ರನ್‌, ಮೊಹಮದ್‌ ನಬಿ 14(14) ರನ್‌, ನಾಯಕರ ರಶೀದ್‌ ಖಾನ್‌ 2(6) ರನ್‌, ನೂರ್‌ ಅಹ್ಮದ್‌ 12(18) ರನ್‌, ನವೀನ್‌ ಉಲ್‌-ಹಕ್‌ ಶೂನ್ಯಕ್ಕೆ ಔಟಾದರೇ, ಫರೂಕಿ ಔಟಾಗದೇ 4(1) ರನ್‌ ಗಳಿಸಿದರು.

ಟೀಂ ಇಂಡಿಯಾ ಪರ ಜಸ್‌ಪ್ರಿತ್‌ ಬುಮ್ರಾ 4 ಓವರ್‌ ಬೌಲಿಂಗ್‌ ಮಾಡಿ ಕೇವಲ 7 ರನ್‌ ನೀಡಿ ಪ್ರಮುಖ 3 ವಿಕೆಟ್‌ ಪಡೆದರು. ಅರ್ಷದೀಪ್‌ 3 ವಿಕೆಟ್‌, ಕುಲ್ದೀಪ್‌ ಯಾದವ್‌ 2 ವಿಕೆಟ್‌, ಅಕ್ಷರ್‌ ಪಟೇಲ್‌ ಮತ್ತು ರವೀಂದ್ರ ಜಡೇಜಾ ತಲಾ ಒಂದೊಂದು ಪಡೆದು ಮಿಂಚಿದರು.

ಪಂದ್ಯ ಶ್ರೇಷ್ಠ: ಸೂರ್ಯಕುಮಾರ್‌ ಯಾದವ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

1 hour ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

3 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

3 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

8 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago