ಕ್ರೀಡೆ

Asiacup 2024: ಪಾಕ್‌ ಬಗ್ಗುಬಡಿದು ಟೂರ್ನಿಯಲ್ಲಿ ಶುಭಾರಂಭ ಮಾಡಿದ ಭಾರತ!

ಡಂಬುಲ್ಲಾ: ಭಾರತ ತಂಡ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಪಾಕಿಸ್ತಾನ ಮಹಿಳಾ ತಂಡ ಏಷ್ಯಾಕಪ್‌ 2024ರ ಮೊದಲ ಪಂದ್ಯದಲ್ಲೇ ಟೀಂ ಇಂಡಿಯಾ ಮುಂದೆ 7 ವಿಕೆಟ್‌ಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿತು. ಪಾಕಿಸ್ತಾನ ತಂಡವನ್ನು ಬಗ್ಗುಬಡಿಯುವ ಮೂಲಕ ಮಹಿಳಾ ಭಾರತ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಇಲ್ಲಿನ ರಂಗಿರಿ ಡಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್‌ನ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಿತು. 19.2 ಓವರ್‌ಗಳಿಗೆ ಆಲ್‌ಔಟ್‌ ಆಗಿದ ಪಾಕಿಸ್ತಾನ ಕೇವಲ 108 ರನ್‌ ಗಳಿಸಿ ಭಾರತ ತಂಡಕ್ಕೆ 109ರನ್‌ಗಳ ಸಾಧಾರಣ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಭಾರತ ತಂಡ ಕೇವಲ 14.1 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 109 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಪಾಕಿಸ್ತಾನ್‌ ಇನ್ನಿಂಗ್ಸ್:‌ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಬಂದ ಗುಲ್ ಫಿರೋಜಾ 5(5), ಮುಬೀನಾ ಅಲಿ 11(11) ಅವರನ್ನು ಔಟ್‌ ಮಾಡುವ ಮೂಲಕ ಪಾಕಿಸ್ತಾನಕ್ಕೆ ಪೂಜಾ ಆರಂಭಿಕ ಬ್ರೇಕ್‌ ಹಾಕಿದರು.

ಬಳಿಕ ಬಂದ ಅಮೀನ್‌ 25(35) ರನ್‌ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ ಗರಿಷ್ಠ ರನ್‌. ಟುಬಾ ಹಸನ್‌ 22(19) ಹಾಗೂ ಫಾತಿಮಾ ಸನ ಔಟಾಗದೇ 22(16) ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿ ತಂಡದ ಮೊತ್ತ ನೂರರ ಗಡಿ ದಾಟಲು ಸಹಕರಿಸಿದರು.

ಉಳಿದಂತೆ ನಾಯಕಿ ನಿಧಾ ಧರ್‌ 8(11), ಆಲಿಯಾ ರಿಯಾಜ್‌ 6(11), ಜಾವೇದ್‌ ಡಕ್‌ಔಟ್‌, ಆರೂಬ್‌ ಶಾ 2(3), ಸಾದಿಯಾ ಇಕ್ಬಾಲ್‌ ಹಾಗೂ ನಶ್ರಾ ಸಂಧು ಡಕ್‌ಔಟ್‌ ಆಗಿ ಹೊರನಡೆದರು.

ಟೀಂ ಇಂಡಿಯಾ ಪರ ದೀಪ್ತಿ ಶರ್ಮಾ ಪ್ರಮುಖ ಮೂರು ವಿಕೆಟ್‌ ಕಬಳಿಸಿ ಮಿಂಚಿದರು. ರೇಣುಕಾ ಸಿಂಗ್‌, ಪೂಜಾ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್‌ ತಲಾ 2 ವಿಕೆಟ್‌ ಕಬಳಿಸಿ ಗಮನ ಸೆಳೆದರು.

ಟೀಂ ಇಂಡಿಯಾ ಇನ್ನಿಂಗ್ಸ್‌: ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಶಫಾಲಿ ವರ್ಮಾ 40(29) ರನ್‌ ಹಾಗೂ ಸ್ಮೃತಿ ಮಂದನ್ನಾ 45(31) ರನ್‌ ಗಳಿಸಿ ಉತ್ತಮ ಆರಂಭ ಒದಗಿಸಿಕೊಟ್ಟರು. ಬಳಿಕ ಬಂದ ಹೇಮಲತಾ 14(11) ರನ್‌ ಗಳಿಸಿ ಔಟಾದರು.

ಕೊನೆಯಲ್ಲಿ ಒಂದಾದ ನಾಯಕ ಹರ್ಮನ್‌ಪ್ರೀತ್‌ ಕೌರ್‌ 5(11) ಮತ್ತು ರೋಡ್ರಿಗಸ್‌ 3(3) ರನ್‌ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.

ಪಾಕಿಸ್ತಾನ ಪರ ಆರೂಬ್‌ ಶಾ ಎರಡು ಹಾಗೂ ನಶ್ರಾ ಸಂಧು ಒಂದು ವಿಕೆಟ್‌ ಕಬಳಿಸಿದರು.

ಪಂದ್ಯಶ್ರೇಷ್ಠ: ದೀಪ್ತಿ ಶರ್ಮಾ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದಿಂದಾಗಿ ಇಸ್ರೇಲ್‌, ಯುಎಇ, ಇರಾನ್‌, ಖತಾರ್‌ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ…

3 mins ago

ಇರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ದೇಶದ ಸರ್ವೋಚ್ಚ ನಾಯಕ ಬಲಿ

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…

1 hour ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರೀಪೇಯ್ಡ್  ಆಟೋ ಕೌಂಟರ್ ಆರಂಭಿಸಿ

ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…

4 hours ago

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…

4 hours ago

ಓದುಗರ ಪತ್ರ: ಅಂಬೇಡ್ಕರ್ ಸಮುದಾಯ ಭವನ ಅಭಿವೃದ್ಧಿಪಡಿಸಿ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…

4 hours ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…

5 hours ago