ಕ್ರೀಡೆ

t20 worldcup 2024: ರೋಚಕ ಹಣಾಹಣೆಯಲ್ಲಿ ಗೆದ್ದುಬೀಗಿದ ಭಾರತ; ಪಾಕ್‌ ಬಹುತೇಕ ಟೂರ್ನಿಯಿಂದ ಹೊರಕ್ಕೆ!

ನ್ಯೂಯಾರ್ಕ್:‌ ಟೀಂ ಇಂಡಿಯಾದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ತುತ್ತಾದ ಪಾಕಿಸ್ತಾನ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿದೆ. ಆ ಮೂಲಕ ಪಾಕಿಸ್ತಾನ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಸತತ ಎರಡನೇ ಪಂದ್ಯ ಸೋಲುವ ಮೂಲಕ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ ಆಗಿದೆ.

ಇಲ್ಲಿನ ನಸ್ಸೌ ಕೌಂಟಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಟಿ 20 ವಿಶ್ವಕಪ್‌ ಟೂರ್ನಿಯ ಗ್ರೂಪ್‌ ಹಂತದ 19ನೇ ಪಂದ್ಯದಲ್ಲಿ ಭಾರತ 19 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 119 ರನ್‌ ಗಳಿಸಿ ಪಾಕ್‌ಗೆ 120 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 113 ರನ್‌ ಕಲೆಹಾಕುವ ಮೂಲಕ 6 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ.

ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ಪಾಕಿಸ್ತಾನ ಟೀಮ್‌ ಇಂಡಿಯಾವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಆರಂಭದಲ್ಲಿ ಮಳೆ ಅಡ್ಡಿಯೊಂದಿಗೆ ತಡವಾಗಿ ಶುರುವಾದ ಇನ್ನಿಂಗ್ಸ್‌ನಲ್ಲಿ ತಂಡದ ಪರ ರಿಷಭ್‌ ಪಂತ್‌ ಹೊರತುಪಡಿಸಿ ಉಳಿದ ಯಾವ ಆಟಗಾರರೂ ಸಹ ದೊಡ್ಡ ಆಟವನ್ನಾಡಲಿಲ್ಲ.

ಟೀಮ್‌ ಇಂಡಿಯಾ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಉತ್ತಮ ಆರಂಭ ಕಟ್ಟಿಕೊಡುವಲ್ಲಿ ಎಡವಿದರು. ಕೊಹ್ಲಿ 4 (3) ರನ್‌ ಗಳಿಸಿದರೆ, ರೋಹಿತ್‌ 13 (12)ರನ್‌ ಗಳಿಸಿದರು. ಇನ್ನುಳಿದಂತೆ ರಿಷಭ್‌ ಪಂತ್‌ 42 (31) ರನ್‌, ಅಕ್ಷರ್‌ ಪಟೇಲ್‌ 20 (18) ರನ್‌, ಸೂರ್ಯಕುಮಾರ್‌ ಯಾದವ್‌ 7 (8) ರನ್‌, ಶಿವಮ್‌ ದುಬೆ 3 (9) ರನ್‌, ಹಾರ್ದಿಕ್‌ ಪಾಂಡ್ಯ 7 (12) ರನ್‌, ರವೀಂದ್ರ ಜಡೇಜಾ ಗೋಲ್ಡನ್ ಡಕ್‌ಔಟ್‌, ಅರ್ಷ್‌ದೀಪ್‌ ಸಿಂಗ್‌ 9 (13) ರನ್‌, ಜಸ್‌ಪ್ರೀತ್‌ ಬುಮ್ರಾ ಗೋಲ್ಡನ್‌ ಡಕ್‌ಔಟ್‌ ಮತ್ತು ಮೊಹಮ್ಮದ್‌ ಸಿರಾಜ್‌ ಅಜೇಯ 7 (7) ರನ್‌ ಕಲೆಹಾಕಿದರು.

ಪಾಕಿಸ್ತಾನದ ಪರ ನಸೀಮ್‌ ಶಾ ಹಾಗೂ ಹ್ಯಾರಿಸ್‌ ರೌಫ್‌ ತಲಾ 3 ವಿಕೆಟ್‌ ಪಡೆದರೆ, ಮೊಹಮ್ಮದ್‌ ಆಮೀರ್‌ 2 ವಿಕೆಟ್‌ ಮತ್ತು ಶಾಹೀನ್‌ ಅಫ್ರಿದಿ 1 ವಿಕೆಟ್‌ ಪಡೆದರು.

ಪಾಕಿಸ್ತಾನ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ನಾಯಕ ಬಾಬರ್‌ ಅಜಮ್‌ ಮತ್ತು ಮೊಹಮ್ಮದ್‌ ರಿಜ್ವಾನ್‌ ಕಣಕ್ಕಿಳಿದರು. ಬಾಬರ್‌ 13 (10) ರನ್‌, ಮೊಹಮ್ಮದ್‌ ರಿಜ್ವಾನ್‌ 31(44) ರನ್‌ ಬಾರಿಸಿ ಔಟಾದರು. ಈ ಪಂದ್ಯದಲ್ಲಿಯೂ ಕೂಡಾ ಪಾಕಿಸ್ತಾನಕ್ಕೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ಉಸ್ಮಾನ್‌ ಖಾನ್‌ 13(15) ರನ್‌, ಫಕರ್‌ ಜಮಾನ್‌ 13(8) ರನ್‌, ಇಮಾದ್‌ ವಾಸೀಮ್‌ 15(23) ರನ್‌, ಶದಾಬ್‌ ಖಾನ್‌ 4(7) ರನ್‌ ಇಫ್ತಿಕರ್‌ ರೆಹಮಾನ್‌ 5(9) ರನ್‌ ಗಳಿಸಿದರು. ಕೊನೆಯಲ್ಲಿ ನಸೀಮ್‌ ಶಾ ಹಾಗೂ ಶಾಹೀನ್‌ ಶಾ ಅಫ್ರಿದಿ ಓಟಾಗದೇ ಕ್ರಮವಾಗಿ 10(4) ರನ್‌ ಹಾಗೂ 0(1) ರನ್‌ ಗಳಿಸಿದರು ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಪರ ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ಜಸ್‌ಪ್ರಿತ್‌ ಬುಮ್ರಾ 3 ವಿಕೆಟ್‌, ಹಾರ್ದಿಕ್‌ ಪಾಂಡ್ಯ 2 ವಿಕೆಟ್‌ ಹಾಗೂ ಅರ್ಶ್‌ದೀಪ್‌ ಸಿಂಗ್‌ ಮತ್ತು ಜಡೇಜಾ ತಲಾ 1 ವಿಕೆಟ್‌ ಪಡೆದು ಮಿಂಚಿದರು.

ಪಂದ್ಯ ಶ್ರೇಷ್ಠ: ಜಸ್‌ಪ್ರಿತ್‌ ಬುಮ್ರಾ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

2 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

4 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

4 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

5 hours ago