ಕ್ರೀಡೆ

t20 worldcup 2024: ರೋಚಕ ಹಣಾಹಣೆಯಲ್ಲಿ ಗೆದ್ದುಬೀಗಿದ ಭಾರತ; ಪಾಕ್‌ ಬಹುತೇಕ ಟೂರ್ನಿಯಿಂದ ಹೊರಕ್ಕೆ!

ನ್ಯೂಯಾರ್ಕ್:‌ ಟೀಂ ಇಂಡಿಯಾದ ಸಂಘಟಿತ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ದಾಳಿಗೆ ತುತ್ತಾದ ಪಾಕಿಸ್ತಾನ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ಎದುರು ಹೀನಾಯ ಸೋಲು ಕಂಡಿದೆ. ಆ ಮೂಲಕ ಪಾಕಿಸ್ತಾನ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಸತತ ಎರಡನೇ ಪಂದ್ಯ ಸೋಲುವ ಮೂಲಕ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ ಆಗಿದೆ.

ಇಲ್ಲಿನ ನಸ್ಸೌ ಕೌಂಟಿ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಟಿ 20 ವಿಶ್ವಕಪ್‌ ಟೂರ್ನಿಯ ಗ್ರೂಪ್‌ ಹಂತದ 19ನೇ ಪಂದ್ಯದಲ್ಲಿ ಭಾರತ 19 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 119 ರನ್‌ ಗಳಿಸಿ ಪಾಕ್‌ಗೆ 120 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 113 ರನ್‌ ಕಲೆಹಾಕುವ ಮೂಲಕ 6 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ.

ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ಪಾಕಿಸ್ತಾನ ಟೀಮ್‌ ಇಂಡಿಯಾವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಆರಂಭದಲ್ಲಿ ಮಳೆ ಅಡ್ಡಿಯೊಂದಿಗೆ ತಡವಾಗಿ ಶುರುವಾದ ಇನ್ನಿಂಗ್ಸ್‌ನಲ್ಲಿ ತಂಡದ ಪರ ರಿಷಭ್‌ ಪಂತ್‌ ಹೊರತುಪಡಿಸಿ ಉಳಿದ ಯಾವ ಆಟಗಾರರೂ ಸಹ ದೊಡ್ಡ ಆಟವನ್ನಾಡಲಿಲ್ಲ.

ಟೀಮ್‌ ಇಂಡಿಯಾ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಉತ್ತಮ ಆರಂಭ ಕಟ್ಟಿಕೊಡುವಲ್ಲಿ ಎಡವಿದರು. ಕೊಹ್ಲಿ 4 (3) ರನ್‌ ಗಳಿಸಿದರೆ, ರೋಹಿತ್‌ 13 (12)ರನ್‌ ಗಳಿಸಿದರು. ಇನ್ನುಳಿದಂತೆ ರಿಷಭ್‌ ಪಂತ್‌ 42 (31) ರನ್‌, ಅಕ್ಷರ್‌ ಪಟೇಲ್‌ 20 (18) ರನ್‌, ಸೂರ್ಯಕುಮಾರ್‌ ಯಾದವ್‌ 7 (8) ರನ್‌, ಶಿವಮ್‌ ದುಬೆ 3 (9) ರನ್‌, ಹಾರ್ದಿಕ್‌ ಪಾಂಡ್ಯ 7 (12) ರನ್‌, ರವೀಂದ್ರ ಜಡೇಜಾ ಗೋಲ್ಡನ್ ಡಕ್‌ಔಟ್‌, ಅರ್ಷ್‌ದೀಪ್‌ ಸಿಂಗ್‌ 9 (13) ರನ್‌, ಜಸ್‌ಪ್ರೀತ್‌ ಬುಮ್ರಾ ಗೋಲ್ಡನ್‌ ಡಕ್‌ಔಟ್‌ ಮತ್ತು ಮೊಹಮ್ಮದ್‌ ಸಿರಾಜ್‌ ಅಜೇಯ 7 (7) ರನ್‌ ಕಲೆಹಾಕಿದರು.

ಪಾಕಿಸ್ತಾನದ ಪರ ನಸೀಮ್‌ ಶಾ ಹಾಗೂ ಹ್ಯಾರಿಸ್‌ ರೌಫ್‌ ತಲಾ 3 ವಿಕೆಟ್‌ ಪಡೆದರೆ, ಮೊಹಮ್ಮದ್‌ ಆಮೀರ್‌ 2 ವಿಕೆಟ್‌ ಮತ್ತು ಶಾಹೀನ್‌ ಅಫ್ರಿದಿ 1 ವಿಕೆಟ್‌ ಪಡೆದರು.

ಪಾಕಿಸ್ತಾನ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ನಾಯಕ ಬಾಬರ್‌ ಅಜಮ್‌ ಮತ್ತು ಮೊಹಮ್ಮದ್‌ ರಿಜ್ವಾನ್‌ ಕಣಕ್ಕಿಳಿದರು. ಬಾಬರ್‌ 13 (10) ರನ್‌, ಮೊಹಮ್ಮದ್‌ ರಿಜ್ವಾನ್‌ 31(44) ರನ್‌ ಬಾರಿಸಿ ಔಟಾದರು. ಈ ಪಂದ್ಯದಲ್ಲಿಯೂ ಕೂಡಾ ಪಾಕಿಸ್ತಾನಕ್ಕೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು. ಉಸ್ಮಾನ್‌ ಖಾನ್‌ 13(15) ರನ್‌, ಫಕರ್‌ ಜಮಾನ್‌ 13(8) ರನ್‌, ಇಮಾದ್‌ ವಾಸೀಮ್‌ 15(23) ರನ್‌, ಶದಾಬ್‌ ಖಾನ್‌ 4(7) ರನ್‌ ಇಫ್ತಿಕರ್‌ ರೆಹಮಾನ್‌ 5(9) ರನ್‌ ಗಳಿಸಿದರು. ಕೊನೆಯಲ್ಲಿ ನಸೀಮ್‌ ಶಾ ಹಾಗೂ ಶಾಹೀನ್‌ ಶಾ ಅಫ್ರಿದಿ ಓಟಾಗದೇ ಕ್ರಮವಾಗಿ 10(4) ರನ್‌ ಹಾಗೂ 0(1) ರನ್‌ ಗಳಿಸಿದರು ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಪರ ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ಜಸ್‌ಪ್ರಿತ್‌ ಬುಮ್ರಾ 3 ವಿಕೆಟ್‌, ಹಾರ್ದಿಕ್‌ ಪಾಂಡ್ಯ 2 ವಿಕೆಟ್‌ ಹಾಗೂ ಅರ್ಶ್‌ದೀಪ್‌ ಸಿಂಗ್‌ ಮತ್ತು ಜಡೇಜಾ ತಲಾ 1 ವಿಕೆಟ್‌ ಪಡೆದು ಮಿಂಚಿದರು.

ಪಂದ್ಯ ಶ್ರೇಷ್ಠ: ಜಸ್‌ಪ್ರಿತ್‌ ಬುಮ್ರಾ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago