ಕ್ರೀಡೆ

ICC T20 WC FINAL| ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಟ್ರೋಫಿಗೆ ಮುತ್ತಿಟ್ಟ ರೋಹಿತ್‌ ಪಡೆ!

ಬಾರ್ಬಡೋಸ್‌: ಸಂಘಟಿತ ಬ್ಯಾಟಿಂಗ್‌ ಬೌಲಿಂಗ್‌ ನೆರವಿನಿಂದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್‌ಗಳ ಅಂತರದಿಂದ ಭಾರತ ತಂಡ ಗೆಲುವು ದಾಖಲಿತು. ಆ ಮೂಲಕ ರೋಹಿತ್‌ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಟ್ರೋಫಿಗೆ ಮುತ್ತಿಕ್ಕುವ ಮೂಲಕ ದಶಕಗಳ ಟ್ರೋಫಿ ಬರಕ್ಕೆ ಬ್ರೇಕ್‌ ಹಾಕಿತು.

ಇತ್ತ ಟೀಂ ಇಂಡಿಯಾ ವಿರುದ್ಧ ಸೋತ ಸೌಥ್‌ ಆಫ್ರಿಕಾ ತಂಡದ ಚೊಚ್ಚಲ ಟ್ರೋಫಿ ಎತ್ತುವ ಕನಸು ಕನಸಾಗಿಯೇ ಉಳಿಯಿತು.

ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 176 ರನ್‌ ಬಾರಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ 177 ರನ್‌ ಗಳ ಸವಾಲಿನ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ ಕ್ಲಾಸೆನ್‌ ಅವರ ಅರ್ಧಶತಕ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 169 ರನ್‌ ಬಾರಿಸಿ 7 ರನ್‌ಗಳ ಅಂತರದಿಂದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿತು.

ಟೀಂ ಇಂಡಿಯಾ ಇನ್ನಿಂಗ್ಸ್‌: ಟೀಂ ಇಂಡಿಯಾ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿತು. ಹರಿಣಗಳ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಪ್ರತ್ಯುತ್ತರವಾಗಿ ಟೀಂ ಇಂಡಿಯಾದ ರನ್‌ ಮೆಷಿನ್‌ ಬ್ಯಾಟ್‌ ಬೀಸಿದರು. ನಿಧಾನಗತಿಯಿಂದ ಇನ್ನಿಂಗ್ಸ್‌ ಕಟ್ಟಿದ ವಿರಾಟ್‌ 59 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 76 ರನ್‌ ಗಳಿಸಿದರು. ಇವರಿಗೆ ಶಿವಂ ದುಬೆ 27(16) ರನ್‌ ಬಾರಿಸಿ ವಿರಾಟ್‌ಗೆ ಸಾಥ್‌ ನೀಡಿದರು.

ಉಳಿದಂತೆ ಅಕ್ಷರ್‌ ಪಟೇಲ್‌ 47(31) ರನ್‌, ನಾಯಕ ರೋಹಿತ್‌ ಶರ್ಮಾ 9(5) ರನ್‌, ರಿಷಭ್‌ ಪಂತ್‌ ಡಕ್‌ಔಟ್‌, ಸೂರ್ಯಕುಮಾರ್‌ ಯಾದವ್‌ 3(4)ರನ್‌, ಹಾರ್ದಿಕ್‌ ಪಾಂಡ್ಯ ಔಟಾಗದೇ 5(2) ರನ್‌, ರವೀಂದ್ರ ಜಡೇಜಾ 2(2) ರನ್‌ ಕಲೆಹಾಕಿದರು.

ದಕ್ಷಿಣ ಆಫ್ರಿಕಾ ಪರ ಕೇಶವ್‌ ಮಹಾರಾಜ್‌ ಹಾಗೂ ನೋಕಿಯೋ 2, ರಬಾಡ ಮತ್ತ ಮಾರ್ಕೋ ಎನ್ಸರ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌: ಸವಾಲಿನ ಮೊತ್ತ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕ ಹೆನ್ರಿಕ್‌ 4(5) ರನ್‌ ಗಳಿಸಿ ಮೊದಲ ಓವರ್‌ನಲ್ಲೇ ಬುಮ್ರಾಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಬಳಿಕ ಬಂದ ನಾಯಕ ಐಡೆನ್‌ ಮಾರ್ಕ್ರಂ 4(5)ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ತಂಡ ಸಂಕಷ್ಟದ ಸ್ಥಿತಿಯಲ್ಲಿದ್ದಾಗ ಡಿಕಾಕ್‌ 39(31)ರನ್‌ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ 31(21) ರನ್‌ ಗಳಿಸಿ ಚೇತರಿಕೆಯ ಆಟವಾಡಿದರು.

ಬಳಿಕ ಒಂದಾದ ಕ್ಲಾಸೆನ್‌ ಹಾಗೂ ಮಿಲ್ಲರ್‌ ಜೋಡಿ ಅರ್ಧಶತಕ ಜತೆಯಾಟ ಆಡುವ ಮೂಲಕ ಭಾರತ ತಂಡದ ಬೌಲರ್‌ಗಳನ್ನು ಕಾಡಿದರು. ಹೆನ್ರಿಕ್ಸ್‌ ಕ್ಲಾಸೆನ್‌ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ ಭರ್ಜರಿ 5 ಸಿಕ್ಸರ್‌ ಸಹಿತ 52 ರನ್‌ ಬಾರಿಸಿದರು. ಮಾರ್ಕೋ ಎನ್ಸನ್‌ 2(4) ರನ್‌,

ಆದರೆ ಕೊನೆಯವರೆಗೂ ನಿಂತು ಹೋರಾಡಿದ ಡೇವಿಡ್‌ ಮಿಲ್ಲರ್‌ 21(17) ರನ್‌ ಗಳಿಸಿಯೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಉಳಿದಂತೆ ರಬಾಡ 4(3) ರನ್‌, ಕೇಶವ್‌ ಮಹಾರಾಜ್‌ ಔಟಾಗದೇ 2(7)ರನ್‌ ಹಾಗೂ ನೋಕಿಯೋ 1(1) ರನ್‌ ಗಳಿಸಿದರು.

ಟೀಂ ಇಂಡಿಯಾ ಪರ ಹಾರ್ದಿಕ್‌ ಪಾಂಡ್ಯ 3, ಅರ್ಷ್‌ದೀಪ್‌ ಸಿಂಗ್‌ ಹಾಗೂ ಜಸ್‌ಪ್ರಿತ್‌ ಬುಮ್ರಾ ತಲಾ 2 ವಿಕೆಟ್‌, ಅಕ್ಷರ್‌ ಪಟೇಲ್‌ ಒಂದು ವಿಕೆಟ್‌ ಕಬಳಿಸಿ ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

6 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

7 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

18 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

18 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

18 hours ago