ಕ್ರೀಡೆ

Zim vs Ind ಟಿ20 ಸರಣಿ: ಕೊನೆ ಪಂದ್ಯ ಗೆದ್ದು 4-1 ಅಂತರದಿಂದ ಸರಣಿ ವಶಪಡಿಸಿಕೊಂಡ ಭಾರತ

ಹರಾರೆ: ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ 42 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿದ ಟೀಂ ಇಂಡಿಯಾ ತಂಡ ಐದು ಟಿ20 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿತು.

ಇಲ್ಲಿನ ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 167 ರನ್‌ ಕಲೆಹಾಕಿ 168 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಜಿಂಬಾಬ್ವೆ 18.3 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 125 ರನ್‌ ಕಲೆಹಾಕಿ 42 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಟೀಂ ಇಂಡಿಯಾ ಇನ್ನಿಂಗ್ಸ್‌: ಕೊನೆಯ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟ್‌ ಮಾಡಿದ ಭಾರತ ತಂಡದ ಪರವಾಗಿ ನಾಯಕ ಶುಭ್‌ಮನ್‌ ಗಿಲ್‌ ಹಾಗೂ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಿದರು. ಜೈಸ್ವಾಲ್‌ 12(5) ಬೇಗನೇ ಔಟಾದರೇ, ನಾಯಕ ಗಿಲ್‌ 13(14)ರನ್‌ ಗಳಿಸಿ ಅವರನ್ನೇ ಹಿಂಬಾಲಿಸಿದರು.

ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 58 ರನ್‌ ಗಳಿಸದರು. ಇದು ತಂಡದ ಪರವಾಗಿ ಗಳಿಸಿದ ಗರಿಷ್ಠ ರನ್‌ ಆಗಿತ್ತು. ಉಳಿದಂತೆ ಅಭಿಷೇಕ್‌ ಶರ್ಮಾ 14(11) ರನ್‌, ರಿಯಾನ್‌ ಪರಾಗ್‌ 22(24)ರನ್‌, ದುಬೆ 26(12)ರನ್‌, ರಿಂಕು ಹಾಗೂ ವಾಷಿಂಗ್‌ಟನ್‌ ಸುಂದರ್‌ ಔಟಾಗದೇ ತಲಾ 11(9)ರನ್‌, 1(1)ರನ್‌ ಗಳಿಸಿದರು.

ಜಿಂಬಾಬ್ವೆ ಪರ ಮುಜರಬಾನಿ ಎರಡು ವಿಕೆಟ್‌ ನಾಗರವ, ನಾಯಕ ರಾಝಾ ಹಾಗೂ ಬ್ರಂಡನ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಜಿಂಬಾಬ್ವೆ ಇನ್ನಿಂಗ್ಸ್‌: ಟೀಂ ಇಂಡಿಯಾ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಂಬಾಬ್ವೆಗೆ ಮುಖೇಶ್‌ ಕುಮಾರ್‌ ಆಘಾತ ನೀಡಿದರು. ವೆಸ್ಲಿ ಅವರು ಮುಖೇಶ್‌ ಕುಮಾರ್‌ ಅವರ ಮೊದಲ ಓವರ್‌ನಲ್ಲಿಯೇ ಬಲಿಯಾದರು. ಬಳಿಕ ಬಂದ ಬೆನೆಟ್‌ 10(8) ರನ್‌ ಗಳಿಸಿ ಮುಖೇಶ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಚೇಸಿಂಗ್‌ ವೇಳೆ ಮೇಯರ್‌ ಗಳಿಸಿದ 34(32)ರನ್‌ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಫರಾಜ್‌ ಅಕ್ರಮ್‌ 27(13) ರನ್‌ ಗಳಿಸಿದರು ಇದರ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಟ್ಟಿ ಗೆಲ್ಲುವಲ್ಲಿ ವಿಫಲರಾದರು.

ಮುರುಮಾನಿ 27(24), ಸಿಕಂದರ್‌ ರಾಜಾ 8(12), ಕ್ಯಾಂಪ್‌ಬೆಲ್‌ 4(7), ಕ್ಲೈವ್‌ 1(4), ಬ್ರಂಡನ್‌ 4(7), ನಾಗವರ ಡಕ್‌ಔಟ್‌, ಮುಜರಬಾನಿ ಔಟಾಗದೇ 1(2)ರನ್‌ ಗಳಿಸಿದರು.

ಟೀಂ ಇಂಡಿಯಾ ಪರವಾಗಿ ಮುಖೇಶ್‌ ಕುಮಾರ್‌ 4 ವಿಕೆಟ್‌, ಶಿವಂ ದುಬೆ 2 ವಿಕೆಟ್‌, ಅಭಿಷೇಕ್‌ ಶರ್ಮಾ, ದೇಶ್‌ಪಾಂಡೆ ಹಾಗೂ ವಾಷಿಂಗ್‌ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿ ಮಿಂಚಿದರು.

ಪಂದ್ಯ ಶ್ರೇಷ್ಠ: ಶಿವಂ ದುಬೆ

ಸರಣಿ ಶ್ರೇಷ್ಠ: ವಾಷಿಂಗ್‌ಟನ್‌ ಸುಂದರ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

8 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

8 hours ago