ಕ್ರೀಡೆ

Zim vs Ind ಟಿ20 ಸರಣಿ: ಕೊನೆ ಪಂದ್ಯ ಗೆದ್ದು 4-1 ಅಂತರದಿಂದ ಸರಣಿ ವಶಪಡಿಸಿಕೊಂಡ ಭಾರತ

ಹರಾರೆ: ಜಿಂಬಾಬ್ವೆ ವಿರುದ್ಧದ ಕೊನೆಯ ಪಂದ್ಯದಲ್ಲಿ 42 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿದ ಟೀಂ ಇಂಡಿಯಾ ತಂಡ ಐದು ಟಿ20 ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿತು.

ಇಲ್ಲಿನ ಹರಾರೆ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 167 ರನ್‌ ಕಲೆಹಾಕಿ 168 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಜಿಂಬಾಬ್ವೆ 18.3 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 125 ರನ್‌ ಕಲೆಹಾಕಿ 42 ರನ್‌ಗಳ ಅಂತರದಿಂದ ಸೋಲನುಭವಿಸಿತು.

ಟೀಂ ಇಂಡಿಯಾ ಇನ್ನಿಂಗ್ಸ್‌: ಕೊನೆಯ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟ್‌ ಮಾಡಿದ ಭಾರತ ತಂಡದ ಪರವಾಗಿ ನಾಯಕ ಶುಭ್‌ಮನ್‌ ಗಿಲ್‌ ಹಾಗೂ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಿದರು. ಜೈಸ್ವಾಲ್‌ 12(5) ಬೇಗನೇ ಔಟಾದರೇ, ನಾಯಕ ಗಿಲ್‌ 13(14)ರನ್‌ ಗಳಿಸಿ ಅವರನ್ನೇ ಹಿಂಬಾಲಿಸಿದರು.

ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 58 ರನ್‌ ಗಳಿಸದರು. ಇದು ತಂಡದ ಪರವಾಗಿ ಗಳಿಸಿದ ಗರಿಷ್ಠ ರನ್‌ ಆಗಿತ್ತು. ಉಳಿದಂತೆ ಅಭಿಷೇಕ್‌ ಶರ್ಮಾ 14(11) ರನ್‌, ರಿಯಾನ್‌ ಪರಾಗ್‌ 22(24)ರನ್‌, ದುಬೆ 26(12)ರನ್‌, ರಿಂಕು ಹಾಗೂ ವಾಷಿಂಗ್‌ಟನ್‌ ಸುಂದರ್‌ ಔಟಾಗದೇ ತಲಾ 11(9)ರನ್‌, 1(1)ರನ್‌ ಗಳಿಸಿದರು.

ಜಿಂಬಾಬ್ವೆ ಪರ ಮುಜರಬಾನಿ ಎರಡು ವಿಕೆಟ್‌ ನಾಗರವ, ನಾಯಕ ರಾಝಾ ಹಾಗೂ ಬ್ರಂಡನ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

ಜಿಂಬಾಬ್ವೆ ಇನ್ನಿಂಗ್ಸ್‌: ಟೀಂ ಇಂಡಿಯಾ ನೀಡಿದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಜಿಂಬಾಬ್ವೆಗೆ ಮುಖೇಶ್‌ ಕುಮಾರ್‌ ಆಘಾತ ನೀಡಿದರು. ವೆಸ್ಲಿ ಅವರು ಮುಖೇಶ್‌ ಕುಮಾರ್‌ ಅವರ ಮೊದಲ ಓವರ್‌ನಲ್ಲಿಯೇ ಬಲಿಯಾದರು. ಬಳಿಕ ಬಂದ ಬೆನೆಟ್‌ 10(8) ರನ್‌ ಗಳಿಸಿ ಮುಖೇಶ್‌ಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಚೇಸಿಂಗ್‌ ವೇಳೆ ಮೇಯರ್‌ ಗಳಿಸಿದ 34(32)ರನ್‌ ವೈಯಕ್ತಿಕ ಗರಿಷ್ಠ ರನ್‌ ಆಗಿತ್ತು. ಫರಾಜ್‌ ಅಕ್ರಮ್‌ 27(13) ರನ್‌ ಗಳಿಸಿದರು ಇದರ ಹೊರತಾಗಿ ಬೇರಾರಿಂದಲೂ ಉತ್ತಮ ಇನ್ನಿಂಗ್ಸ್‌ ಕಟ್ಟಿ ಗೆಲ್ಲುವಲ್ಲಿ ವಿಫಲರಾದರು.

ಮುರುಮಾನಿ 27(24), ಸಿಕಂದರ್‌ ರಾಜಾ 8(12), ಕ್ಯಾಂಪ್‌ಬೆಲ್‌ 4(7), ಕ್ಲೈವ್‌ 1(4), ಬ್ರಂಡನ್‌ 4(7), ನಾಗವರ ಡಕ್‌ಔಟ್‌, ಮುಜರಬಾನಿ ಔಟಾಗದೇ 1(2)ರನ್‌ ಗಳಿಸಿದರು.

ಟೀಂ ಇಂಡಿಯಾ ಪರವಾಗಿ ಮುಖೇಶ್‌ ಕುಮಾರ್‌ 4 ವಿಕೆಟ್‌, ಶಿವಂ ದುಬೆ 2 ವಿಕೆಟ್‌, ಅಭಿಷೇಕ್‌ ಶರ್ಮಾ, ದೇಶ್‌ಪಾಂಡೆ ಹಾಗೂ ವಾಷಿಂಗ್‌ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಕಬಳಿಸಿ ಮಿಂಚಿದರು.

ಪಂದ್ಯ ಶ್ರೇಷ್ಠ: ಶಿವಂ ದುಬೆ

ಸರಣಿ ಶ್ರೇಷ್ಠ: ವಾಷಿಂಗ್‌ಟನ್‌ ಸುಂದರ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago