ಬಾರ್ಬಡೋಸ್: ಟಿ20 ವಿಶ್ವಕಪ್ ವಿಜೇತ ಭಾರತ ತಂಡ ಟೂರ್ನಿ ನಡೆದು ಎರಡು ದಿನಗಳಾಗಿದ್ದರೂ ಇನ್ನು ಭಾರತದ ಮಣ್ಣಿಗೆ ಕಾಲಿಟ್ಟಿಲ್ಲ. ಭಾರತೀಯರು ವಿಶ್ವಕಪ್ ವಿಜಯ ಸಂಭ್ರಮಾಚರಣೆ ಮಾಡಲು ಇನ್ನು ಕೆಲವು ದಿನಗಳು ಕಾಯಬೇಕಾಗಿದೆ.
ವೆಸ್ಟ್ ಇಂಡೀಸ್ನ ಕೆರೆಬಿಯ್ ದ್ವೀಪಗಳಲ್ಲಿ ಸೋಮವಾರ ಬೆಳಿಗಿನ ಜಾವದಿಂದಲೂ ಕೆಟಗರಿ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನವೂ ಸೇರಿದಂತೆ ಎಲ್ಲ ನಾಗರೀಕ ಸೇವೆಗಳನ್ನು ಸ್ಥಗಿತಗೊಳಸಿದ್ದು, ವಿಮಾನ ಹಾರಾಟವೂ ಕೂಡಾ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಬಿರುಗಾಳಿಯ ಮಟ್ಟ ತೀವ್ರವಾದ ಹಿನ್ನೆಲೆ ಮೂರು ಲಕ್ಷ ಜನಸಂಖ್ಯೆ ಇರುವ ಈ ದ್ವೀಪವನ್ನು ಭಾನುವಾರ ಸಂಜೆಯಿಂದಲೇ ಲಾಕ್ಡೌನ್ ಮಾಡಲಾಗಿದೆ. ಇಂದು (ಜುಲೈ.2) ಅಥವಾ ನಾಳೆ (ಜುಲೈ.3) ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕಾರ್ಯರ್ಶಿ ಜೈ ಶಾ, ನಾವು ಇಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರನ್ನು ಸುರಕ್ಷಿತವಾಗಿ ದೇಶಕ್ಕೆ ರವಾನಿಸಲಾಗುವುದು ಇದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಭಾರತದಿಂದ ತೆರಳಿರುವ ಮಾಧ್ಯಮ ಮಿತ್ರರರನ್ನು ಸಹಾ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು ಎಂದು ಅವರು ಹೇಳಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…